ಆಗ ತಾನೇ ಕುರುಕ್ಷೇತ್ರ ಯುದ್ಧ ಮುಗಿದಿತ್ತು. ಆದರೆ ನನ್ನ ಅಗ್ರಜನೆನಿಸಿಕೊಂಡ ಧರ್ಮಜನ ಚಿತ್ತದೊಳಗೆ ಕಲಹವೊಂದು ಆರಂಭವಾಗಿತ್ತು. ಅದು ಧರ್ಮ ಅಧರ್ಮಗಳ ಕಲಹ. ಸರಿ ತಪ್ಪುಗಳ ಕಲಹ. ಯುದ್ಧದ ನೆಪದಲ್ಲಿ ಸೋದರರು ಸಂಬಂಧಿಗಳನ್ನು ಕೊಂದು ತಾನೆಲ್ಲಿ ತಪ್ಪು ಎಸಗಿದೆನೋ ಎಂಬ ಪಶ್ಚಾತ್ತಾಪ ಭಾವ ಅವನನ್ನು ಕಾಡತೊಡಗಿತ್ತು. ವಾಸ್ತವವಾಗಿ ಅವನ ಆಳ್ವಿಕೆಯಲ್ಲಿ ಪ್ರಜೆಗಳಿಗೆ ಯಾವ ತೊಂದರೆಯೂ ಇರಲಿಲ್ಲ. ರಾಜ್ಯ ಸುಭಿಕ್ಷವಾಗಿತ್ತು. ಚೋರರ ಚತುರತೆಗೆ ಆಸ್ಪದವಿರಲಿಲ್ಲ. ಕೊಲೆಗಡುಕರ ಕ್ರೂರತೆಗೆ ಅವಕಾಶವಿರಲಿಲ್ಲ. ಹಸ್ತಿನಾವತಿಯ ಯಾವ ದೆಶೆಗೆ ದೃಷ್ಟಿ ಹರಿಸಿದರೂ ಅಲ್ಲಿ ಸಂಪದದ ಕಾಣ್ಕೆ. ಯಾವ ದಿಕ್ಕಿಗೆ ನೋಟ ಬೀರಿದರೂ ಅಲ್ಲಿ ಸೊಗದ ದರ್ಶನ. ಇಂದ್ರನ ಅಮರಾವತಿಗೆ ಸ್ಪರ್ಧೆಯನ್ನೊಡ್ಡುವಂತಿತ್ತು ಹಸ್ತಿನಾವತಿ. ಇಂತಹ ಸುಖದ ಅತಿರೇಕಾವಸ್ಥೆಯಲ್ಲಿಯೂ ನನ್ನಣ್ಣನ ಧರ್ಮೋದಾತ್ತ ಚಿತ್ತ ಚಲಿಸಿದ್ದು ಗತಕಾಲದಲ್ಲಿ ನಡೆದುಹೋದ ಮನುಜ ಆಹುತಿಯೆಡೆಗೆ. ಕುರುಕ್ಷೇತ್ರ ರಣಭೂಮಿಯಲ್ಲಿ ಸತ್ತುಹೋಗಿದ್ದವರೆಲ್ಲರೂ ಅವನ ಮನದಲ್ಲಿ ಮರುಜನ್ಮ ಪಡೆದೂ ಪಡೆದೂ ಅವನನ್ನು ಸತಾಯಿಸತೊಡಗಿದ್ದರು. ಎಲ್ಲರ ಸಾವಿಗೂ ತಾನು ಕಾರಣನಾದೆನಲ್ಲಾ ಎಂಬ ಯೋಚನೆ ಧರ್ಮಶ್ರೇಷ್ಠನೆನಿಸಿಕೊಂಡ ಅವನನ್ನು ಕಾಡಿದ್ದು ಕೆಣಕಿದ್ದು ಅಸಹಜ ಸಂಗತಿಯೇನಲ್ಲ.
ಹೀಗೆ ಖಿನ್ನತೆಯಲ್ಲಿ ಬಾಡಿ, ಸುಖಿಸುವವರ ಗುಂಪಿನಲ್ಲಿ ಭಿನ್ನನಾಗಿ ಮುದುಡಿಹೋಗಿದ್ದ ಧರ್ಮವೀರನನ್ನು ಕಂಡವರು ವ್ಯಾಸರು. ಮುನಿಶ್ರೇಷ್ಠರೆನಿಸಿಕೊಂಡಿದ್ದ ಅವರಿಗೆ ನನ್ನಣ್ಣನ ಭಿನ್ನಬಗೆಯನ್ನು ಗುರುತಿಸುವುದೇನೂ ಕಷ್ಟವಾಗಲಿಲ್ಲ. ಕೇಳಿಯೇಬಿಟ್ಟರು, “ಏಕೆ ಹೀಗಿಹೆ ಧರ್ಮಜ? ನಿನ್ನ ಮೊಗಭಾವವಿದು ಅಸಹಜ!”
ಇರುವ ಹತ್ತು ಜನರ ಗುಂಪಿನಲ್ಲಿ ಒಂಭತ್ತು ಮಂದಿ ನಗುತ್ತಿದ್ದು, ಒಬ್ಬ ಮಾತ್ರವೇ ಸುಮ್ಮನೆ ಕುಳಿತಿದ್ದರೆ ಇಂತಹದ್ದೊಂದು ಪ್ರಶ್ನೆ ಉದ್ಭವಿಸುವುದು ಸಹಜವೇ. ಅದನ್ನೇ ಕೇಳಿದ್ದರು ವ್ಯಾಸರು. ಹೇಳಬೇಕೋ ಬೇಡವೋ ಎಂಬ ಗೊಂದಲ ನನ್ನಣ್ಣನಲ್ಲಿ. ಸಂಕೋಚದಿಂದಲೇ, ತನ್ನ ಮನವನ್ನಾವರಿಸಿದ್ದ ನೋವಿನ ಮೋಡದೆಡೆಗೆ ಬೆರಳು ತೋರಿಸಿ ಕಣ್ಣೀರಿನ ವರ್ಷಧಾರೆಯನ್ನು ಹರಿಸಿದ. ಸ್ವಗೋತ್ರವಧೆಯ ಕಳಂಕ ತನ್ನನ್ನು ತಟ್ಟಿತಲ್ಲಾ ಎಂದು ಹಲುಬಿದ. ಅರಸುತನವಿದು ಸಾಕು ನನಗೆ. ಅರಣ್ಯಮುಖಿಯಾಗಿ ವೈರಾಗ್ಯ ಭಾವದಲ್ಲಿಯೇ ಉಳಿದ ಜೀವನವನ್ನು ಕಳೆಯುತ್ತೇನೆ ಎಂದು ಪ್ರಲಾಪಿಸಿದ.
ಧರ್ಮಜನ ದುಃಖವನ್ನು ಕೇಳಿಸಿಕೊಂಡ ವ್ಯಾಸರ ಕಿವಿ ಕವಿಹೃದಯಕ್ಕೆ ಸಮಾನವಾಯಿತು. ನಿಗಮಾಗಮ ಶಾಸ್ತ್ರ ಪುರಾಣಗಳನ್ನು ಅರಿತಿದ್ದರೂ ಆ ಬಗೆಯಲ್ಲಿ ನುಡಿಯುತ್ತಿರುವ ಧರ್ಮರಾಯನ ನಿಲುವು ಅವರಿಗೆ ನೂತನವೆನಿಸಿತು. ಚಕಿತಚಿತ್ತರಾದರು ವ್ಯಾಸರು. “ದುಃಖವೇಕೆ? ಸಾಮ್ರಾಜ್ಯವನ್ನು ಪರಿಪಾಲಿಸದೆ ಅರಣ್ಯ ಸೇರಿಕೊಳ್ಳುವುದರಲ್ಲಿ ಅದೇನು ಸಾರ್ಥಕತೆಯಿದೆ ನಿನಗೆ?” ಎಂದು ಕೇಳಿ, ಅವನ ನಿರ್ಣಯವನ್ನು ಬದಲಿಸುವ ಯತ್ನ ಮಾಡಿದರು.
ನನ್ನಣ್ಣನ ಚಿತ್ತ ಬದಲಾಗಲಿಲ್ಲ. ಅಖಿಲ ಸಾಮ್ರಾಜ್ಯವೀಗ ತನ್ನ ಕೈಯ್ಯಡಿಯಲ್ಲಿದೆ ಎಂದು ಸಂಭ್ರಮಿಸುವ ಮನಃಸ್ಥಿತಿ ಅವನದ್ದಾಗಿರಲಿಲ್ಲ. ಅದನ್ನೇ ಹೇಳಿದ. ಭೀಷ್ಮಾಚಾರ್ಯರು, ದ್ರೋಣಾಚಾರ್ಯರು, ಕರ್ಣ, ಶಲ್ಯ, ದುರ್ಯೋಧನ ಮೊದಲಾದವರಿಲ್ಲದ ಭೂಮಿಯನ್ನು ಆಳುವ ಇಚ್ಛೆಯನ್ನವನು ಅದಾಗಲೇ ಕಳೆದುಕೊಂಡಿದ್ದ. ಸಕಲ ಮೇಧಿನಿಯ ಅಧಿಕಾರವನ್ನು ಭೀಮಸೇನನಿಗೆ ಕೊಟ್ಟು ವನವನ್ನು ಸೇರಿಕೊಳ್ಳುತ್ತೇನೆ ಎಂಬ ಮಾತು ಮತ್ತೆ ಅವನಿಂದ ಬಂತು.
ಈಗ ಮತ್ತೊಮ್ಮೆ ಯುದಿಷ್ಠಿರನ ಸಂಕಷ್ಟಕ್ಕೆ ಸ್ಪಂದಿಸುವ ಉದಾರತೆಯನ್ನು ತೋರಿದರು ವ್ಯಾಸಶ್ರೇಷ್ಠರು. “ಕ್ಷಾತ್ರಧರ್ಮಕ್ಕೆ ಅನುಸಾರವಾಗಿ ನೀನು ನಡೆದುಕೊಂಡಿರುವೆ. ಇದರಲ್ಲಿ ನಿನ್ನದೇನಿದೆ ತಪ್ಪು! ಧರ್ಮವನ್ನು ಪರಿಪಾಲಿಸಿರುವ ನೀನು ಅಧರ್ಮಿಯೆನಿಸಿಕೊಳ್ಳಲಾರೆ. ಗೋತ್ರವಧೆಯ ಪಾಪ ನಿನ್ನನ್ನು ತಟ್ಟಲಾರದು” ಎಂಬ ಸಾಂತ್ವನದ ನುಡಿಮುತ್ತುಗಳು ಅವರಿಂದ ಬಂತು. ಜೊತೆಗೆ “ನೀನು ಅರಣ್ಯ ಸೇರಿಕೊಳ್ಳುವುದೇ ಒಳ್ಳೆಯದು. ವಾಯುಪುತ್ರ ಭೀಮನಿಗೆ ನಾವು ಪಟ್ಟವನ್ನು ಕಟ್ಟುತ್ತೇವೆ” ಎಂಬ ವ್ಯಂಗ್ಯದ ಮಾತನ್ನೂ ಆಡಿದರು.
ವ್ಯಾಸರ ನುಡಿ ಧರ್ಮಜನನ್ನು ಕಾಡಿತು. ಭೂಮಿಯನ್ನು ತಾನೇ ಆಳುವುದಾಗಿ ಒಪ್ಪಿಕೊಂಡ. ಗೋತ್ರಹತ್ಯೆಯ ದೋಷ ಇನ್ನಿಲ್ಲವಾಗುವ ಪರಿಯೆಂತು ಎಂದು ಅವರನ್ನೇ ಕೇಳಿದ. ಆಗಲೇ ವ್ಯಾಸರು ಧರ್ಮಜನ ಮನದ ಖಿನ್ನತೆಯನ್ನು ಶೂನ್ಯವಾಗಿಸುವ ಮಹಾಧ್ವರವೊಂದರ ಪ್ರಸ್ತಾಪವನ್ನೆತ್ತಿದ್ದು. ಅದು ಅಶ್ವಮೇಧ ಯಾಗದ ಬಗೆಗಿನ ಪ್ರಸ್ತಾಪ. ಹಿಂದೆ ಸೋಮಕುಲದ ಮಹಾರಾಜರುಗಳೆಲ್ಲಾ ಮಹಾಯಾಗಗಳನ್ನು ಮಾಡಿ ತಮ್ಮ ದೋಷಗಳನ್ನು ನೀಗಿಕೊಂಡಿದ್ದರಂತೆ. ಈಗ ಧರ್ಮಜನೂ ಅದೇ ರೀತಿಯಲ್ಲಿ ಅಶ್ವಮೇಧ ಯಾಗವನ್ನು ಕೈಗೊಂಡರೆ ಅವನ ದೋಷವೆಲ್ಲಾ ಕಳೆದುಹೋಗಿ ಶುಚಿತ್ವ ಅವನದಾಗುತ್ತದೆ ಎಂದರು ವ್ಯಾಸರು.
ತನ್ನ ವಂಶದ ರಾಜರುಗಳು ಸಾಧುತ್ವವನ್ನು ಕಳೆದುಕೊಂಡಿಲ್ಲ ಎನ್ನುವುದನ್ನು ರುಜುವಾತುಪಡಿಸಿಕೊಳ್ಳುವ ಆಕಾಂಕ್ಷೆಯಿತ್ತು ಧರ್ಮಜನಿಗೆ. ವ್ಯಾಸರ ಕರುಣೆಯಿಂದಲೇ ತನ್ನ ಬದುಕಿಗೊಂದು ಹೊಸ ಆರಂಭ ಎಂಬ ಆಶಾವಾದವಿತ್ತು ಅವನಲ್ಲಿ.
ತನ್ನ ಕಡೆಗೆ ಕರುಣಾಜನಕ ಕಣ್ಣೋಟ ಹರಿಸಿದ ಯುದಿಷ್ಠಿರನಿಗೆ ಅಶ್ವಮೇಧ ಯಾಗದ ಹಿನ್ನೆಲೆಯನ್ನು ಚೆನ್ನಾಗಿಯೇ ಮನವರಿಕೆ ಮಾಡಿದರು ವ್ಯಾಸರು. ಅವರು ಹೇಳಿದ್ದು ತ್ರೇತಾಯುಗದ ಬಗ್ಗೆ. ರಘುವಂಶಜನಾದ ಶ್ರೀರಾಮಚಂದ್ರ ಲಂಕಾಧಿಪತಿ ರಾವಣನನ್ನು ಕೊಂದ ಬಳಿಕ ಅಶ್ವಮೇಧ ಯಾಗವನ್ನು ಕೈಗೊಂಡಿದ್ದನಂತೆ. ಆ ಮೂಲಕ ಬ್ರಾಹ್ಮಣರನ್ನು ತೃಪ್ತಿಗೊಳಿಸಿದ್ದನಂತೆ. ಕೌಸಲ್ಯಾತನಯ ಶ್ರೀರಾಮನಂತೆಯೇ ಅಶ್ವಮೇಧ ಯಾಗವನ್ನೀಗ ಕುಂತೀಪುತ್ರ ಧರ್ಮರಾಯ ಮಾಡಬೇಕು ಎನ್ನುವುದು ವ್ಯಾಸರಿತ್ತ ಸಲಹೆ.
ಮಾಡುವುದೆಂತು ಆ ಯಾಗವನ್ನು? ಎಂತಹ ಕುದುರೆ ಇದ್ದರೆ ಒಳಿತು? ಎನ್ನುವುದು ಧರ್ಮಜ ತಕ್ಷಣವೇ ಎದುರಿಗಿಟ್ಟ ಪ್ರಶ್ನೆಗಳು. ಅದಕ್ಕೆ ಉಚಿತವಾದ ಉತ್ತರವಿತ್ತು ವ್ಯಾಸರಲ್ಲಿ. ಹೇಳತೊಡಗಿದರು…
ಅಣ್ಣ ಧರ್ಮಜನ ಬಗೆಗೆ ಹೂಮನಸ್ಸನ್ನಿಟ್ಟುಕೊಂಡು ಯೌವನಾಶ್ವನ ಅಶ್ವವನ್ನು ಗೆದ್ದುತರುವ ಹುಮ್ಮಸ್ಸಿನಲ್ಲಿ ವೃಷಧ್ವಜ ಮೇಘನಾದರ ಜೊತೆಗೆ ಹಸ್ತಿನಾವತಿಯಿಂದ ಹೊರಟಿದ್ದ ಅನಿಲಸುತನೀಗ ಭದ್ರಾವತಿ…
ಕರ್ನಾಟಕ ಸಾಹಿತ್ಯ ಅಕಾಡೆಮಿಯ ಪ್ರತಿಷ್ಠಿತ ಯುವಕವಿಗೋಷ್ಠಿಗೆ ಒಟ್ಟು ೨೩ ಯುವಕವಿಗಳು ಆಯ್ಕೆಯಾಗಿದ್ದು, ಜುಲೈ 21ರಂದು ಬೆಳಗಾವಿಯಲ್ಲಿ ನಡೆಯಲಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು…
ಕರ್ನಾಟಕ ಸಾಹಿತ್ಯ ಅಕಾಡೆಮಿಯ ಪ್ರತಿಷ್ಠಿತ ಯುವಕವಿಗೋಷ್ಠಿಗೆ ಒಟ್ಟು ೨೩ ಯುವಕವಿಗಳು ಆಯ್ಕೆಯಾಗಿದ್ದು, ಜುಲೈ ೧೦ರಂದು ತುಮಕೂರಿನಲ್ಲಿ ನಡೆಯಲಿದೆ. ಈ ಕಾರ್ಯಕ್ರಮಕ್ಕೆ…
View Comments
Alright, heard about pkrvipgames from a mate. Gave it a whirl and not bad at all! Games are decent enough, and the site's pretty easy to get around. Could use a few more options, but I'm not complaining. Check it out for yourself! pkrvipgames
FK77login gets you straight to the games. No hassle, just fun. Found some new favorite slots here. Worth checking out! fk77login
Betfest is where the action is at! Great odds and a huge selection of events to bet on. This is my go-to spot for sports betting. betfest
Punters, gather 'round! Looking for horse racing predictions? Nesine's got the tips to help you pick a winner. See the predictions at yarışı tahminleri nesine.
Hey sports fans! Need live scores? Nesine's got you covered. Check out canlı maç sonuçları nesine for all the latest action.
Always keeping an eye on those nesine çekiliş sonuçları! Fingers crossed for a win, haha. See if you're a winner!: nesine çekiliş sonuçları
Just wrapped up a session on 4playbetcasino. Nothing crazy, standard enough. Swing by 4playbetcasino if you feel like looking.
TG777com, been hittin' it up lately! Site's slick, games are fun, and you know, sometimes luck is on your side. Worth a shot if you're lookin' for a new spot. Check it out: tg777com
Yo, phil168login makes jumping into the game a breeze! Super smooth login process and everything loads fast. Definitely worth checking out. Get your game on at phil168login