ಇಲಕಲ್ಲಿನ ಶ್ರೀ ವಿಜಯ ಮಹಾಂತೇಶ ಕಲೆ, ವಿಜ್ಞಾನ ಹಾಗೂ ವಾಣಿಜ್ಯ ಪದವಿ ಮಹಾವಿದ್ಯಾಲಯದ ಕನ್ನಡ ಸಹಾಯಕ ಪ್ರಾಧ್ಯಾಪಕರಾದ, ಕವಿ ಡಾ.ಸದಾಶಿವ ದೊಡಮನಿ ಅವರ ‘ಇರುವುದು ಒಂದೇ ರೊಟ್ಟಿ’ ಕವನ ಸಂಕಲನಕ್ಕೆ 2021ನೆಯ ಸಾಲಿನ ದಲಿತ ಸಾಹಿತ್ಯ ಪರಿಷತ್ತಿನ ‘ಬೆಳ್ಳಿ ಸಂಭ್ರಮ ಪುಸ್ತಕ ಪ್ರಶಸ್ತಿ’ ಲಭಿಸಿದೆ. ಡಾ. ಸದಾಶಿವ ಅವರು ಇದೂವರೆಗೆ ‘ಧರೆಹತ್ತಿ ಉರಿದೊಡೆ’, ‘ನೆರಳಿಗೂ ಮೈಲಿಗೆ’, ‘ಇರುವುದು ಒಂದೇ ರೊಟ್ಟಿ’ ಕವನ ಸಂಕಲನಗಳನ್ನು; ‘ಧಾರವಾಡ ಮತ್ತು ಹಲಸಂಗಿ ಗೆಳೆಯರ ಗುಂಪು: ಒಂದು ಸಾಂಸ್ಕೃತಿಕ ಅಧ್ಯಯನ’ ಸಂಶೋಧನಾ ಮಹಾಪ್ರಬಂಧವನ್ನು; ‘ಪ್ರತಿಸ್ಪಂದನ’ ವಿಮರ್ಶೆಯನ್ನು; ‘ದಲಿತ ಸಾಹಿತ್ಯ ಸಂಚಯ’ ಸಂಪಾದನಾ ಕೃತಿಯನ್ನು ಪ್ರಕಟಿಸಿದ್ದಾರೆ. ಅವರ ‘ಇರುವುದು ಒಂದೇ ರೊಟ್ಟಿ’ ಕವನ ಸಂಕಲನಕ್ಕೆ 2021 ನೇ ಸಾಲಿನ ‘ಸೃಷ್ಟಿಕಾವ್ಯ ಪುರಸ್ಕಾರ’ ಸಂದಿದೆ.
ಜುಲೈ 29 ಹಾಗೂ 30 ರಂದು ವಿಜಯಪುರ ನಗರದ ಕಂದಗಲ್ ಹಣಮಂತರಾಯ ರಂಗಮಂದಿರದಲ್ಲಿ ದಲಿತ ಸಾಹಿತ್ಯ ಪರಿಷತ್ತಿನ ‘ಬೆಳ್ಳಿ ಸಂಭ್ರಮ’ ಪ್ರಯುಕ್ತ ಆಯೋಜಿಸಲಾಗಿರುವ ಹತ್ತನೆಯ ಅಖಿಲ ಭಾರತ ದಲಿತ ಸಾಹಿತ್ಯ ಸಮ್ಮೇಳನದಲ್ಲಿ ಡಾ. ಸದಾಶಿವ ದೊಡಮನಿ ಅವರಿಗೆ ‘ಬೆಳ್ಳಿ ಸಂಭ್ರಮ ಪುಸ್ತಕ ಪ್ರಶಸ್ತಿ’ಯನ್ನು ಪ್ರದಾನ ಮಾಡಲಾಗುವುದೆಂದು ದ.ಸಾ.ಪ ರಾಜ್ಯ ಘಟಕದ ಅಧ್ಯಕ್ಷರಾದ ಡಾ. ಅರ್ಜುನ ಗೊಳಸಂಗಿ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಕರ್ನಾಟಕ ಸಾಹಿತ್ಯ ಅಕಾಡೆಮಿಯ ಪ್ರತಿಷ್ಠಿತ ಯುವಕವಿಗೋಷ್ಠಿಗೆ ಒಟ್ಟು ೨೩ ಯುವಕವಿಗಳು ಆಯ್ಕೆಯಾಗಿದ್ದು, ಜುಲೈ ೧೦ರಂದು ತುಮಕೂರಿನಲ್ಲಿ ನಡೆಯಲಿದೆ. ಈ ಕಾರ್ಯಕ್ರಮಕ್ಕೆ…
ಅಶ್ವಮೇಧ ಯಾಗದ ಕುದುರೆ ಹೇಗಿದ್ದರೆ ಚೆನ್ನ ಎಂಬ ಮಾತು ಮುನಿವರ್ಯರಿಂದ ಮೂಡಿಬಂತು. ಕುದುರೆ ಸ್ವಚ್ಛವಾಗಿರಬೇಕು. ಶ್ವೇತವರ್ಣದಿಂದ ಕಂಗೊಳಿಸುತ್ತಿರಬೇಕು. ನೋಡುವುದಕ್ಕೆ ಆಕರ್ಷಕವಾಗಿರಬೇಕು.…
ನಿಲ್ಲುವುದೇ ಸಾವು ಚಲಿಸುವುದೇ ಬಾಳು – ಕುವೆಂಪು ನಮ್ಮ ಬದುಕಿನಲ್ಲಿ ಸಾಯುವುದೆಂದರೆ ಏನು? ಚಲನೆಯಿಲ್ಲದೆ ಕಾಲ ಹಾಯಿಸುವುದೇನು? ಬದಲಾವಣೆ, ಚಟುವಟಿಕೆ,…
ಆಗ ತಾನೇ ಕುರುಕ್ಷೇತ್ರ ಯುದ್ಧ ಮುಗಿದಿತ್ತು. ಆದರೆ ನನ್ನ ಅಗ್ರಜನೆನಿಸಿಕೊಂಡ ಧರ್ಮಜನ ಚಿತ್ತದೊಳಗೆ ಕಲಹವೊಂದು ಆರಂಭವಾಗಿತ್ತು. ಅದು ಧರ್ಮ ಅಧರ್ಮಗಳ…
ಏಕ ವ್ಯಕ್ತಿಯಲ್ಲಿ ಬಹು ಚಹರೆಗಳನ್ನು ಬಿಂಬಿಸುವ ಕಲಾಪ್ರೌಢಿಮೆಯ ಸೃಜನಶೀಲ ಪ್ರಯತ್ನ ರಂಗ ಸಂಪದ ಬೆಂಗಳೂರು ಕರ್ನಾಟಕದ ರಂಗಭೂಮಿಯನ್ನು ಕಳೆದ ಐದು…