ಸಾಹಿತ್ಯ ಸುದ್ದಿ

ಈ ಹೊತ್ತಿಗೆಯಿಂದ, ನಾಟಕ ರಚನಾ ಕಮ್ಮಟ – 2024 ಜನವರಿ 26, 27 ಮತ್ತು 28

2024 ಜನವರಿ 26, 27 ಮತ್ತು 28 ರಂದು, ಬೆಳಗಾವಿಯಲ್ಲಿ ಈ ಹೊತ್ತಿಗೆಯ ‘ನಾಟಕ ರಚನಾ ಕಮ್ಮಟ’ ನಡೆಯಲಿದ್ದು, ಬೆಳಗಾವಿಯ ‘ನಮ್ಮವರೊಂದಿಗೆ’ ಬಳಗವು ಸಹಯೋಗ ನೀಡಲಿದೆ. ಈ ಹೊತ್ತಿಗೆ ಟ್ರಸ್ಟ್, ತನ್ನ ದಶಮಾನೋತ್ಸವ ಸಂಭ್ರಮದ ನಿಮಿತ್ತ ಆಯೋಜಿಸುತ್ತಿರುವ 3ನೇ ಕಮ್ಮಟ ಇದಾಗಿದೆ.

ನಾಟಕವು ಅತ್ಯಂತ ಪ್ರಭಾವಶಾಲಿ ಸಾಹಿತ್ಯ ಪ್ರಕಾರ. ಸಮುದಾಯದ ಆಗುಹೋಗುಗಳಷ್ಟೇ ಅದರ ಚಲನೆಗಳನ್ನು ಮುನ್ನೋಟದಲ್ಲಿ ಕೊಡಬಲ್ಲ ಶಕ್ತಿಯೂ ಇದಕ್ಕಿದೆ. ಸಾಹಿತ್ಯ ಪ್ರಕಾರವಲ್ಲದೆ ಸಾಮಾಜಿಕ, ರಾಜಕೀಯ ಹಾಗೂ ಸಾಂಸ್ಕೃತಿಕ ಹೋರಾಟಗಳ ಮಾಧ್ಯಮವಾಗಿಯೂ ನಾಟಕ ತನ್ನ ಬಹು ಪಾತ್ರಗಳನ್ನು ನಿಭಾಯಿಸುತ್ತಾ ಬಂದಿದೆ. ಆದ್ದರಿಂದಲೇ ಸಾಹಿತ್ಯ ಚರಿತ್ರೆಯಲ್ಲಿ ನಾಟಕಕ್ಕೆ ವಿಶಿಷ್ಟ ಮತ್ತು ಮಹತ್ವದ ಸ್ಥಾನವಿದೆ. ಈ ಹಿನ್ನೆಲೆಯಲ್ಲಿ ನಾಟಕ ರಚನೆಯ ತಾತ್ವಿಕ, ತಾಂತ್ರಿಕ ಹಾಗೂ ಸೌಂದರ್ಯಾತ್ಮಕ ನೆಲೆಗಳನ್ನು ಪರಿಚಯಿಸುವ ಹಾಗೂ ಕನ್ನಡದ ಸಮೃದ್ಧ ನಾಟಕ ಪರಂಪರೆಯನ್ನು ಅರಿಯುವ ನಾಟಕ ಶಿಬಿರವನ್ನು ಈ ಹೊತ್ತಿಗೆಯಿಂದ ಬೆಳಗಾವಿಯಲ್ಲಿ ಆಯೋಜಿಸಲಾಗಿದೆ. ನಾಟಕ ರಚನೆಯಲ್ಲಿ ಉತ್ಸುಸಕರಾಗಿರುವವರಿಗೆ ಇದೊಂದು ಸುವರ್ಣಾವಕಾಶ.

ಕನ್ನಡ ಸಾಹಿತ್ಯಲೋಕದ ಮಹತ್ವದ ವಿಮರ್ಶಕಿಯಾದ ಡಾ. ಎಂ.ಎಸ್. ಆಶಾದೇವಿ ಅವರು ಕಮ್ಮಟಕದ ನಿರ್ದೇಶಕರಾಗಿರುತ್ತಾರೆ.

ಡಾ. ಕೆ ವೈ ನಾರಾಯಣಸ್ವಾಮಿ, ಶ್ರೀಪಾದ ಭಟ್, ಹೇಮಾ ಪಟ್ಟಣಶೆಟ್ಟಿ, ಡಾ. ರಾಮಕೃಷ್ಣ ಮರಾಠೆ, ಪ್ರಕಾಶ್ ಗರುಡ ಮತ್ತು ರಜನಿ ಗರುಡ ಅವರು ಸಂಪನ್ಮೂಲ ವ್ಯಕ್ತಿಗಳಾಗಿರುತ್ತಾರೆ.

ಈ ಮೂರು ದಿನಗಳ ಈ ಕಮ್ಮಟದಲ್ಲಿ ಭಾಗವಹಿಸಲು ಬಯಸುವವರು ನಿಮ್ಮ ಪರಿಚಯ, ಸಂಪರ್ಕ ಸಂಖ್ಯೆ, ಭಾವಚಿತ್ರವನ್ನು ehottige.ks@gmail.com ಈ ಮಿಂಚಂಚೆಗೆ ಕಳುಹಿಸಿಕೊಡಿ.

1. ಕಮ್ಮಟದ ಪ್ರವೇಶ ಶುಲ್ಕ 2000 ರೂಪಾಯಿ. ಪ್ರವೇಶ ಶುಲ್ಕವನ್ನು ಮರಳಿಸಲಾಗುವುದಿಲ್ಲ.
2.ವಸತಿ ಮತ್ತು ಊಟದ ವ್ಯವಸ್ಥೆ ಇರುತ್ತದೆ.
3. ಮೂವತ್ತು ಜನರಿಗೆ ಮಾತ್ರ ಅವಕಾಶ.
4. ಶಿಬಿರಕ್ಕೆ ಆಯ್ಕೆಯಾದವರನ್ನು ಸಂಪರ್ಕಿಸಲಾಗುವುದು.
5. ಅರ್ಜಿ ತಲುಪಲು ಕೊನೆಯ ದಿನಾಂಕ: 07 ಜನವರಿ 2024

SHANKAR G

Recent Posts

ತುಮಕೂರಿನಲ್ಲಿ ಜುಲೈ ೧೦ರಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ಬೆಂಗಳೂರು ವಲಯದ (8 ಜಿಲ್ಲೆಗಳ) ಯುವಕವಿಗೋಷ್ಠಿ ಕಾರ್ಯಕ್ರಮ

ಕರ್ನಾಟಕ ಸಾಹಿತ್ಯ ಅಕಾಡೆಮಿಯ ಪ್ರತಿಷ್ಠಿತ ಯುವಕವಿಗೋಷ್ಠಿಗೆ ಒಟ್ಟು ೨೩ ಯುವಕವಿಗಳು ಆಯ್ಕೆಯಾಗಿದ್ದು, ಜುಲೈ ೧೦ರಂದು ತುಮಕೂರಿನಲ್ಲಿ ನಡೆಯಲಿದೆ. ಈ ಕಾರ್ಯಕ್ರಮಕ್ಕೆ…

56 years ago

ಯಾಗದ ಬಗೆಯನ್ನು ವರ್ಣಿಸಿದರು ವ್ಯಾಸರು – ಡಾ. ವಿಶ್ವನಾಥ ಎನ್ ನೇರಳಕಟ್ಟ

ಅಶ್ವಮೇಧ ಯಾಗದ ಕುದುರೆ ಹೇಗಿದ್ದರೆ ಚೆನ್ನ ಎಂಬ ಮಾತು ಮುನಿವರ್ಯರಿಂದ ಮೂಡಿಬಂತು. ಕುದುರೆ ಸ್ವಚ್ಛವಾಗಿರಬೇಕು. ಶ್ವೇತವರ್ಣದಿಂದ ಕಂಗೊಳಿಸುತ್ತಿರಬೇಕು. ನೋಡುವುದಕ್ಕೆ ಆಕರ್ಷಕವಾಗಿರಬೇಕು.…

56 years ago

ಆತ್ಮಸ್ಥೈರ್ಯದ ಬೆಳಕು ನಮ್ಮ ಮುಂದಿರಲಿ.. – ಲಿಖಿತ್ ಹೊನ್ನಾಪುರ

ನಿಲ್ಲುವುದೇ ಸಾವು ಚಲಿಸುವುದೇ ಬಾಳು – ಕುವೆಂಪು ನಮ್ಮ ಬದುಕಿನಲ್ಲಿ ಸಾಯುವುದೆಂದರೆ ಏನು? ಚಲನೆಯಿಲ್ಲದೆ ಕಾಲ ಹಾಯಿಸುವುದೇನು? ಬದಲಾವಣೆ, ಚಟುವಟಿಕೆ,…

56 years ago

ಜೂನ್ 2025 ಮಿಂಚುಳ್ಳಿ ಸಂಚಿಕೆ

ಜೂನ್ 2025 ಮಿಂಚುಳ್ಳಿ ಸಂಚಿಕೆ ಓದಲು ಇಲ್ಲಿ ಕ್ಲಿಕ್ ಮಾಡಿ

56 years ago

ಧರ್ಮವೀರನ ಚಿತ್ತ ಖಿನ್ನತೆ – ಡಾ. ವಿಶ್ವನಾಥ ಎನ್ ನೇರಳಕಟ್ಟೆ

ಆಗ ತಾನೇ ಕುರುಕ್ಷೇತ್ರ ಯುದ್ಧ ಮುಗಿದಿತ್ತು. ಆದರೆ ನನ್ನ ಅಗ್ರಜನೆನಿಸಿಕೊಂಡ ಧರ್ಮಜನ ಚಿತ್ತದೊಳಗೆ ಕಲಹವೊಂದು ಆರಂಭವಾಗಿತ್ತು. ಅದು ಧರ್ಮ ಅಧರ್ಮಗಳ…

56 years ago

ಪುರಾಣ ಕಥನದ ಅಪೂರ್ವ ರಂಗ ಪ್ರಯೋಗ “ಶರ್ಮಿಷ್ಠೆ” – ನಾ ದಿವಾಕರ

ಏಕ ವ್ಯಕ್ತಿಯಲ್ಲಿ ಬಹು ಚಹರೆಗಳನ್ನು ಬಿಂಬಿಸುವ ಕಲಾಪ್ರೌಢಿಮೆಯ ಸೃಜನಶೀಲ ಪ್ರಯತ್ನ ರಂಗ ಸಂಪದ ಬೆಂಗಳೂರು ಕರ್ನಾಟಕದ ರಂಗಭೂಮಿಯನ್ನು ಕಳೆದ ಐದು…

56 years ago