ಸಾಹಿತ್ಯ ಸುದ್ದಿ

ಈ ಹೊತ್ತಿಗೆ ಪ್ರಶಸ್ತಿ ಪ್ರದಾನ ಸಮಾರಂಭ: ಮಾರ್ಚ್ 09, 2025

ಸಾಹಿತ್ಯಾಸಕ್ತರೆಲ್ಲರಿಗೂ ಆತ್ಮೀಯ ಸ್ವಾಗತ.

ದಿನಾಂಕ: ೦೯ ಮಾರ್ಚ್ ೨೦೨೫ರಂದು ಬೆಳಿಗ್ಗೆ ೧೦.೦೦ ಗಂಟೆಗೆ ಬೆಂಗಳೂರಿನ ಜೆಪಿ ನಗರದಲ್ಲಿರುವ ಕಪ್ಪಣ್ಣ ಅಂಗಳದಲ್ಲಿ ಈ ಹೊತ್ತಿಗೆಯ ೧೨ನೇ ವಾರ್ಷಿಕೋತ್ಸವ ‘ಹೊನಲು’ ಕಾರ್ಯಕ್ರಮವಿದೆ. ಕಾರ್ಯಕ್ರಮದಲ್ಲಿ ೨೦೨೫ನೇ ಸಾಲಿನ ಈ ಹೊತ್ತಿಗೆ ಕಥಾಪ್ರಶಸ್ತಿ ಹಾಗೂ ಈ ಹೊತ್ತಿಗೆ ಕಾವ್ಯ ಪ್ರಶಸ್ತಿ ಪ್ರದಾನವಿದ್ದು, ಪ್ರಶಸ್ತಿ ಪ್ರದಾನವನ್ನು ಕರ್ನಾಟಕ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಶ್ರೀ. ಎಲ್ ಎನ್ ಮುಕುಂದರಾಜ್ ನೆರವೇರಿಸಲಿದ್ದಾರೆ. ಈ ವರ್ಷದ ಕಾವ್ಯ ಪ್ರಶಸ್ತಿ ವಿಜೇತರು, ಡಾ. ಲಕ್ಷ್ಮಣ ವಿ ಎ ಹಾಗೂ ಕಥಾಪ್ರಶಸ್ತಿ ವಿಜೇತರು ಪೂರ್ಣಿಮಾ ಭಟ್ಟ ಸಣ್ಣಕೇರಿ ಅವರಾಗಿದ್ದು, ಇದೇ ಸಮಯದಲ್ಲಿ ಪ್ರಶಸ್ತಿ ವಿಜೇತ ಕೃತಿಗಳ ಲೋಕಾರ್ಪಣೆಯಾಗಲಿದೆ. ಕೃತಿ ಪರಿಚಯವನ್ನು ಆನಂದ ಕುಂಚನೂರ್ ಮತ್ತು ಸಂಗೀತಾ ಚಚಡಿ ಮಾಡಿಕೊಡಲಿದ್ದಾರೆ.

ಇದೇ ಕಾರ್ಯಕ್ರಮದಲ್ಲಿ ಒಂದು ಗೋಷ್ಠಿ ಹಾಗೂ ಒಂದು ಸಂವಾದವಿದೆ. ‘ಅಕ್ಷರ ಜಾನಪದ’ ಎಂಬ ಗೋಷ್ಠಿಯಲ್ಲಿ, ಖ್ಯಾತ ಗಾಯಕರಾದ ಜನಪದಶ್ರೀ. ಅಪ್ಪಗೆರೆ ತಿಮ್ಮರಾಜು ಹಾಗೂ ಜಾನಪದ ತಜ್ಞೆ, ಕವಿ ರೇಣುಕಾ ಕೋಡಗುಂಟಿ ಅವರು ಮಾತನಾಡಲಿದ್ದಾರೆ, ಈ ಗೋಷ್ಠಿಯ ಅಧ್ಯಕ್ಷ್ಯತೆಯನ್ನು ಖ್ಯಾತ ಕತೆಗಾರ್ತಿ, ಕಾದಂಬರಿಗಾರ್ತಿ ಜಯಶ್ರೀ ದೇಶಪಾಂಡೆ ನಿರ್ವಹಿಸಲಿದ್ದಾರೆ.

ಗೋಷ್ಠಿಯ ನಂತರ ‘AI ಮತ್ತು ಸಾಹಿತ್ಯ’ ವಿಷಯದ ಮೇಲೆ ಸಂವಾದವಿದ್ದು, ತಂತ್ರಜ್ಞಾನ ಪರಿಣಿತರು, ಕತೆಗಾರರೂ ಆದ ಮಧುಸೂದನ ವೈ ಎನ್ ಹಾಗೂ ಪತ್ರಕರ್ತಾದ ಶ್ರೀದೇವಿ ಡಿ ಎನ್ (ಶ್ರೀ ಡಿ ಎನ್) ಅವರು ಸಂವಾದ ನಡೆಸಲಿದ್ದಾರೆ.

ಈ ವರ್ಷದ ಪ್ರಶಸ್ತಿಗಳ ತೀರ್ಪುಗರಾರಾಗಿರುವ ಖ್ಯಾತ ಕತೆಗಾರ, ಪತ್ರಕರ್ತರಾದ ರಘುನಾಥ ಚ ಹ ಮತ್ತು ಖ್ಯಾತ ಕವಿ, ದೂರದರ್ಶನ ಚಂದನದ ಮುಖ್ಯಸ್ಥರಾದ ಆರತಿ ಎಚ್ ಎನ್ ಅವರು ಹಾಗೂ ಕತೆಗಾರ, ಚಲನಚಿತ್ರ ನಿರ್ದೇಶಕರಾದ ಪ್ರವೀಣ್ ಕುಮಾರ್ ಜಿ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿರುತ್ತಾರೆ.

ಈ ಹೊತ್ತಿಗೆಯ ಅಧ್ಯಕ್ಷರಾದ ಜಯಲಕ್ಷ್ಮಿ ಪಾಟೀಲ್ ಪ್ರಾಸ್ತಾವಿಕ ನುಡಿಗಳನ್ನಾಡಲಿದ್ದು, ಇಂದಿರಾ ಶರಣ್ ಕಾರ್ಯಕ್ರಮದ ನಿರೂಪಣೆ, ಸರ್ವಮಂಗಳಾ ಮೋಹನ್ ಅವರು ಅತಿಥಿಗಳ ಪರಿಚಯ ಮಾಡಲಿದ್ದಾರೆ.

ದಿನಾಂಕ: ೦೯ ಮಾರ್ಚ್ ೨೦೨೫, ಭಾನುವಾರ
ಸಮಯ: ಬೆಳಗ್ಗೆ ೧೦.೦೦ರಿಂದ ಮದ್ಯಾಹ್ನ ೦೧.೩೦ರವರೆಗೆ  
ಸ್ಥಳ: ಕಪ್ಪಣ್ಣ ಅಂಗಳ, ೧೪೮/೧, ೩೨ನೇ ಎ ಮುಖ್ಯರಸ್ತೆ, ಜೆಪಿ ನಗರ, ೧ನೇ ಹಂತ, ಬೆಂಗಳೂರು.

 

SHANKAR G

Recent Posts

ತುಮಕೂರಿನಲ್ಲಿ ಜುಲೈ ೧೦ರಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ಬೆಂಗಳೂರು ವಲಯದ (8 ಜಿಲ್ಲೆಗಳ) ಯುವಕವಿಗೋಷ್ಠಿ ಕಾರ್ಯಕ್ರಮ

ಕರ್ನಾಟಕ ಸಾಹಿತ್ಯ ಅಕಾಡೆಮಿಯ ಪ್ರತಿಷ್ಠಿತ ಯುವಕವಿಗೋಷ್ಠಿಗೆ ಒಟ್ಟು ೨೩ ಯುವಕವಿಗಳು ಆಯ್ಕೆಯಾಗಿದ್ದು, ಜುಲೈ ೧೦ರಂದು ತುಮಕೂರಿನಲ್ಲಿ ನಡೆಯಲಿದೆ. ಈ ಕಾರ್ಯಕ್ರಮಕ್ಕೆ…

56 years ago

ಯಾಗದ ಬಗೆಯನ್ನು ವರ್ಣಿಸಿದರು ವ್ಯಾಸರು – ಡಾ. ವಿಶ್ವನಾಥ ಎನ್ ನೇರಳಕಟ್ಟ

ಅಶ್ವಮೇಧ ಯಾಗದ ಕುದುರೆ ಹೇಗಿದ್ದರೆ ಚೆನ್ನ ಎಂಬ ಮಾತು ಮುನಿವರ್ಯರಿಂದ ಮೂಡಿಬಂತು. ಕುದುರೆ ಸ್ವಚ್ಛವಾಗಿರಬೇಕು. ಶ್ವೇತವರ್ಣದಿಂದ ಕಂಗೊಳಿಸುತ್ತಿರಬೇಕು. ನೋಡುವುದಕ್ಕೆ ಆಕರ್ಷಕವಾಗಿರಬೇಕು.…

56 years ago

ಆತ್ಮಸ್ಥೈರ್ಯದ ಬೆಳಕು ನಮ್ಮ ಮುಂದಿರಲಿ.. – ಲಿಖಿತ್ ಹೊನ್ನಾಪುರ

ನಿಲ್ಲುವುದೇ ಸಾವು ಚಲಿಸುವುದೇ ಬಾಳು – ಕುವೆಂಪು ನಮ್ಮ ಬದುಕಿನಲ್ಲಿ ಸಾಯುವುದೆಂದರೆ ಏನು? ಚಲನೆಯಿಲ್ಲದೆ ಕಾಲ ಹಾಯಿಸುವುದೇನು? ಬದಲಾವಣೆ, ಚಟುವಟಿಕೆ,…

56 years ago

ಜೂನ್ 2025 ಮಿಂಚುಳ್ಳಿ ಸಂಚಿಕೆ

ಜೂನ್ 2025 ಮಿಂಚುಳ್ಳಿ ಸಂಚಿಕೆ ಓದಲು ಇಲ್ಲಿ ಕ್ಲಿಕ್ ಮಾಡಿ

56 years ago

ಧರ್ಮವೀರನ ಚಿತ್ತ ಖಿನ್ನತೆ – ಡಾ. ವಿಶ್ವನಾಥ ಎನ್ ನೇರಳಕಟ್ಟೆ

ಆಗ ತಾನೇ ಕುರುಕ್ಷೇತ್ರ ಯುದ್ಧ ಮುಗಿದಿತ್ತು. ಆದರೆ ನನ್ನ ಅಗ್ರಜನೆನಿಸಿಕೊಂಡ ಧರ್ಮಜನ ಚಿತ್ತದೊಳಗೆ ಕಲಹವೊಂದು ಆರಂಭವಾಗಿತ್ತು. ಅದು ಧರ್ಮ ಅಧರ್ಮಗಳ…

56 years ago

ಪುರಾಣ ಕಥನದ ಅಪೂರ್ವ ರಂಗ ಪ್ರಯೋಗ “ಶರ್ಮಿಷ್ಠೆ” – ನಾ ದಿವಾಕರ

ಏಕ ವ್ಯಕ್ತಿಯಲ್ಲಿ ಬಹು ಚಹರೆಗಳನ್ನು ಬಿಂಬಿಸುವ ಕಲಾಪ್ರೌಢಿಮೆಯ ಸೃಜನಶೀಲ ಪ್ರಯತ್ನ ರಂಗ ಸಂಪದ ಬೆಂಗಳೂರು ಕರ್ನಾಟಕದ ರಂಗಭೂಮಿಯನ್ನು ಕಳೆದ ಐದು…

56 years ago