ಕವಿತೆಗಳು

ದೇವೇಂದ್ರ ಕಟ್ಟಿಮನಿ ಅವರು ಬರೆದ ಗಜಲ್

ಊರ ದಾರಿಯು ನೇರವಿಲ್ಲ, ಇಟ್ಟ ಗುರಿಯು ನೆಟ್ಟಗಿರಲಿ, ಕೊನೆಗೆ
ಕೊಟ್ಟ ಮಾತಿಗೆ ತೊಟ್ಟ ಬಟ್ಟೆಗೆ, ಕಪ್ಪು ಕಲೆಯು ತಟ್ಟದಿರಲಿ, ಕೊನೆಗೆ. ||

ಜಗದ ಸುತ್ತ ಹುತ್ತ ಚಾಚಿದೆ, ಬಿತ್ತಿ ಬೆಳೆಯಲು ಬಿಟ್ಟರದು ಬರಡು
ನೆರೆದ ಮಂದಿಯ ನೂರು ಮಾತಿಗೆ ಕೆರೆಯು ಬತ್ತದಿರಲಿ, ಕೊನೆಗೆ. ||

ಹೊತ್ತು ಗೊತ್ತಿನ ಹುರುಳು ಇಲ್ಲದ ಕೊರಳೊಂದು ಕೆರಳಿದೆ ಬಿಡದೇ
ಸೋತು ಸವಿದು ಒಣಗಿರುವ ಬದುಕಿಗೆ ಬೆಂಕಿ ಹಚ್ಚದಿರಲಿ, ಕೊನೆಗೆ. ||

ಬೆಡಗು ಬೆಂಗುಡಿಗೆ ನಡುಗಿದೆ ಮನ, ಕಡೆಗೂ ತಡೆವವರು ಯಾರು ?
ಚುಚ್ಹುದುಲ ಹೊಳೆಯಲಿ, ದೋಣಿ ದಾರಿಯು ಮುಚ್ಚದಿರಲಿ, ಕೊನೆಗೆ. ||

ಮಬ್ಬಿನಲಿ ಹಬ್ಬಿದ ಹೊಗೆಯು, ಇಬ್ಬನಿಯು ತರದು, ಹುಬ್ಬೇರಿಸದಿರು
ಕಡಿಯುವುದೆ ಕತ್ತಲಿನ ನಾಯಿ ನೆರಳು, ಹುಸಿಯು ಹಬ್ಬದಿರಲಿ, ಕೊನೆಗೆ. ||

ಅಷ್ಟೂ ದಿಕ್ಕಿಗೂ ಎಷ್ಟು ತೂರಿದರೇನು ಕಸವು, ಗಾಳಿ ಬೀಸದೆ “ಬೋಧಿ”
ಸೊಕ್ಕಿದ ಸುಳಿಗಾಳಿಯ ದಿಕ್ಕಿಗೆ, ಮಿಕ್ಕಿ ತೆಕ್ಕೆಯು ಚಾಚದಿರಲಿ, ಕೊನೆಗೆ. ||

SHANKAR G

View Comments

  • ಸರ್, ಗಜಲ್ ಚೆನ್ನಾಗಿದೆ. ಆದರೆ 'ಚುಚ್ಹುದುಲ ಹೊಳೆಯಲಿ' ಅಂದರೆ ಏನು?

    • ಸರ್. ಅದು ಹುಚ್ಚುದುಲ ಆಗಬೇಕಿತ್ತು. ತಪ್ಪಾಗಿ ನಮೂದಾಗಿದೆ. ಕ್ಷಮಿಸಿ.

      • ನಿಮಗೆ ತಿಳಿಯದೆಯ ಅದಕ್ಕು ಕೂಡ ಅರ್ಥವಿದೆ ನೋಡಿ, ಮನಸ್ಸನ್ನು ಚುಚ್ಚುವ ಹುದುಲ ಚುಚ್ಚ್ಹುದುಲ ಆದರೆ..

        • ಸರಿಯಾದ ಅರ್ಥ ಸರ್.

    • ಹುದುಲ - ಗೋಜಲು, ಕೆಸರು, ಗೊಂದಲ

      • ಧನ್ಯವಾದಗಳು ಸರ್.

Share
Published by
SHANKAR G

Recent Posts

ಹೀಗಿತ್ತು ಯೌವನಾಶ್ವ ಆಳುತ್ತಿದ್ದ ನಗರಿ – ಡಾ. ವಿಶ್ವನಾಥ್ ಏನ್. ನೇರಳಕಟ್ಟೆ

ಅಣ್ಣ ಧರ್ಮಜನ ಬಗೆಗೆ ಹೂಮನಸ್ಸನ್ನಿಟ್ಟುಕೊಂಡು ಯೌವನಾಶ್ವನ ಅಶ್ವವನ್ನು ಗೆದ್ದುತರುವ ಹುಮ್ಮಸ್ಸಿನಲ್ಲಿ ವೃಷಧ್ವಜ ಮೇಘನಾದರ ಜೊತೆಗೆ ಹಸ್ತಿನಾವತಿಯಿಂದ ಹೊರಟಿದ್ದ ಅನಿಲಸುತನೀಗ ಭದ್ರಾವತಿ…

56 years ago

ಬೆಳಗಾವಿಯಲ್ಲಿ ಜುಲೈ 21ರಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ಬೆಳಗಾವಿ ವಲಯದ (7 ಜಿಲ್ಲೆಗಳ) ಯುವಕವಿಗೋಷ್ಠಿ ಕಾರ್ಯಕ್ರಮ

ಕರ್ನಾಟಕ ಸಾಹಿತ್ಯ ಅಕಾಡೆಮಿಯ ಪ್ರತಿಷ್ಠಿತ ಯುವಕವಿಗೋಷ್ಠಿಗೆ ಒಟ್ಟು ೨೩ ಯುವಕವಿಗಳು ಆಯ್ಕೆಯಾಗಿದ್ದು, ಜುಲೈ 21ರಂದು ಬೆಳಗಾವಿಯಲ್ಲಿ ನಡೆಯಲಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು…

56 years ago

ತುಮಕೂರಿನಲ್ಲಿ ಜುಲೈ ೧೦ರಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ಬೆಂಗಳೂರು ವಲಯದ (8 ಜಿಲ್ಲೆಗಳ) ಯುವಕವಿಗೋಷ್ಠಿ ಕಾರ್ಯಕ್ರಮ

ಕರ್ನಾಟಕ ಸಾಹಿತ್ಯ ಅಕಾಡೆಮಿಯ ಪ್ರತಿಷ್ಠಿತ ಯುವಕವಿಗೋಷ್ಠಿಗೆ ಒಟ್ಟು ೨೩ ಯುವಕವಿಗಳು ಆಯ್ಕೆಯಾಗಿದ್ದು, ಜುಲೈ ೧೦ರಂದು ತುಮಕೂರಿನಲ್ಲಿ ನಡೆಯಲಿದೆ. ಈ ಕಾರ್ಯಕ್ರಮಕ್ಕೆ…

56 years ago