ಊರ ದಾರಿಯು ನೇರವಿಲ್ಲ, ಇಟ್ಟ ಗುರಿಯು ನೆಟ್ಟಗಿರಲಿ, ಕೊನೆಗೆ
ಕೊಟ್ಟ ಮಾತಿಗೆ ತೊಟ್ಟ ಬಟ್ಟೆಗೆ, ಕಪ್ಪು ಕಲೆಯು ತಟ್ಟದಿರಲಿ, ಕೊನೆಗೆ. ||
ಜಗದ ಸುತ್ತ ಹುತ್ತ ಚಾಚಿದೆ, ಬಿತ್ತಿ ಬೆಳೆಯಲು ಬಿಟ್ಟರದು ಬರಡು
ನೆರೆದ ಮಂದಿಯ ನೂರು ಮಾತಿಗೆ ಕೆರೆಯು ಬತ್ತದಿರಲಿ, ಕೊನೆಗೆ. ||
ಹೊತ್ತು ಗೊತ್ತಿನ ಹುರುಳು ಇಲ್ಲದ ಕೊರಳೊಂದು ಕೆರಳಿದೆ ಬಿಡದೇ
ಸೋತು ಸವಿದು ಒಣಗಿರುವ ಬದುಕಿಗೆ ಬೆಂಕಿ ಹಚ್ಚದಿರಲಿ, ಕೊನೆಗೆ. ||
ಬೆಡಗು ಬೆಂಗುಡಿಗೆ ನಡುಗಿದೆ ಮನ, ಕಡೆಗೂ ತಡೆವವರು ಯಾರು ?
ಚುಚ್ಹುದುಲ ಹೊಳೆಯಲಿ, ದೋಣಿ ದಾರಿಯು ಮುಚ್ಚದಿರಲಿ, ಕೊನೆಗೆ. ||
ಮಬ್ಬಿನಲಿ ಹಬ್ಬಿದ ಹೊಗೆಯು, ಇಬ್ಬನಿಯು ತರದು, ಹುಬ್ಬೇರಿಸದಿರು
ಕಡಿಯುವುದೆ ಕತ್ತಲಿನ ನಾಯಿ ನೆರಳು, ಹುಸಿಯು ಹಬ್ಬದಿರಲಿ, ಕೊನೆಗೆ. ||
ಅಷ್ಟೂ ದಿಕ್ಕಿಗೂ ಎಷ್ಟು ತೂರಿದರೇನು ಕಸವು, ಗಾಳಿ ಬೀಸದೆ “ಬೋಧಿ”
ಸೊಕ್ಕಿದ ಸುಳಿಗಾಳಿಯ ದಿಕ್ಕಿಗೆ, ಮಿಕ್ಕಿ ತೆಕ್ಕೆಯು ಚಾಚದಿರಲಿ, ಕೊನೆಗೆ. ||
ಅಣ್ಣ ಧರ್ಮಜನ ಬಗೆಗೆ ಹೂಮನಸ್ಸನ್ನಿಟ್ಟುಕೊಂಡು ಯೌವನಾಶ್ವನ ಅಶ್ವವನ್ನು ಗೆದ್ದುತರುವ ಹುಮ್ಮಸ್ಸಿನಲ್ಲಿ ವೃಷಧ್ವಜ ಮೇಘನಾದರ ಜೊತೆಗೆ ಹಸ್ತಿನಾವತಿಯಿಂದ ಹೊರಟಿದ್ದ ಅನಿಲಸುತನೀಗ ಭದ್ರಾವತಿ…
ಕರ್ನಾಟಕ ಸಾಹಿತ್ಯ ಅಕಾಡೆಮಿಯ ಪ್ರತಿಷ್ಠಿತ ಯುವಕವಿಗೋಷ್ಠಿಗೆ ಒಟ್ಟು ೨೩ ಯುವಕವಿಗಳು ಆಯ್ಕೆಯಾಗಿದ್ದು, ಜುಲೈ 21ರಂದು ಬೆಳಗಾವಿಯಲ್ಲಿ ನಡೆಯಲಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು…
ಕರ್ನಾಟಕ ಸಾಹಿತ್ಯ ಅಕಾಡೆಮಿಯ ಪ್ರತಿಷ್ಠಿತ ಯುವಕವಿಗೋಷ್ಠಿಗೆ ಒಟ್ಟು ೨೩ ಯುವಕವಿಗಳು ಆಯ್ಕೆಯಾಗಿದ್ದು, ಜುಲೈ ೧೦ರಂದು ತುಮಕೂರಿನಲ್ಲಿ ನಡೆಯಲಿದೆ. ಈ ಕಾರ್ಯಕ್ರಮಕ್ಕೆ…
View Comments
Sir chenagide nimma gajal
ಸರ್, ಗಜಲ್ ಚೆನ್ನಾಗಿದೆ. ಆದರೆ 'ಚುಚ್ಹುದುಲ ಹೊಳೆಯಲಿ' ಅಂದರೆ ಏನು?
ಸರ್. ಅದು ಹುಚ್ಚುದುಲ ಆಗಬೇಕಿತ್ತು. ತಪ್ಪಾಗಿ ನಮೂದಾಗಿದೆ. ಕ್ಷಮಿಸಿ.
ನಿಮಗೆ ತಿಳಿಯದೆಯ ಅದಕ್ಕು ಕೂಡ ಅರ್ಥವಿದೆ ನೋಡಿ, ಮನಸ್ಸನ್ನು ಚುಚ್ಚುವ ಹುದುಲ ಚುಚ್ಚ್ಹುದುಲ ಆದರೆ..
ಸರಿಯಾದ ಅರ್ಥ ಸರ್.
ಹುದುಲ - ಗೋಜಲು, ಕೆಸರು, ಗೊಂದಲ
ಧನ್ಯವಾದಗಳು ಸರ್.