ಸಾಹಿತ್ಯ ಸುದ್ದಿ

ಹಿರಿಯ ಸಾಹಿತಿಗಳಾದ ಪ್ರೊ. ಎಸ್.ಜಿ. ಸಿದ್ಧರಾಮಯ್ಯ ಮತ್ತು ಪ್ರೊ. ಮಾಲತಿ ಪಟ್ಟಣಶೆಟ್ಟಿ ಅವರಿಗೆ ಡಾ. ಗುರುಲಿಂಗ ಕಾಪಸೆ ಸಾಹಿತ್ಯ ಪ್ರಶಸ್ತಿ

ಡಾ. ಗುರುಲಿಂಗ ಕಾಪಸೆ ಸಾಹಿತ್ಯ ಪ್ರಶಸ್ತಿ

೧೯೨೮ರ ಏಪ್ರಿಲ್ ೨ ರಂದು ವಿಜಾಪುರ ಜಿಲ್ಲೆ ಇಂಡಿ ತಾಲೂಕಿನ ಹಿರೇಲೋಣಿಯಲ್ಲಿ ಜನಿಸಿದ ಗುರುಲಿಂಗ ಕಾಪಸೆ ಅವರು, ಎಂ.ಎ. ಪಿಎಚ್.ಡಿ., ಡಿಪ್ಲೊಮಾ ಇನ್ ಎಪಿಗ್ರಾಫಿ ಪೂರೈಸಿದ್ದಾರೆ. ಪ್ರಾಥಮಿಕ ಶಾಲಾ ಶಿಕ್ಷಕರಾಗಿ, ವಿವಿಧ ಕಾಲೇಜುಗಳಲ್ಲಿ ಅಧ್ಯಾಪಕರಾಗಿ, ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಪ್ರವಾಚಕರಾಗಿ, ಕ.ವಿ.ವಿ ಬೆಳಗಾವಿ ಸ್ನಾತಕೋತ್ತರ ಕೇಂದ್ರದ ಆಡಳಿತಾಧಿಕಾರಿಯಾಗಿ ಮತ್ತು ಧಾರವಾಡದ ಹುರಕಡ್ಲಿ ಅಜ್ಜ ಮಹಿಳಾ ಕಾಲೇಜಿನ ಪ್ರಾಚಾರ್ಯರಾಗಿ ಕೆಲಸ ಮಾಡಿದ್ದಾರೆ.

ಕನ್ನಡದ ಪ್ರಾಚೀನ ಸಾಹಿತ್ಯದಿಂದ ಹಿಡಿದು, ಹೊಸಗನ್ನಡದ ವಿವಿಧ ಘಟ್ಟಗಳ ವರೆಗಿನ ಎಲ್ಲ ಸಾಹಿತ್ಯವನ್ನು ಆಳವಾಗಿ ಅಧ್ಯಯನ ಮಾಡಿರುವ ಡಾ. ಗುರುಲಿಂಗ ಕಾಪಸೆ ಅವರು, ಬಹಳ ಮುಖ್ಯವಾಗಿ ಕನ್ನಡ ಅನುಭಾವ ಸಾಹಿತ್ಯ ಪರಂಪರೆಯ ಬಗ್ಗೆ ವಿಶೇಷ ಗಮನ ಹರಿಸಿದವರು. ಶ್ರೀ ಅರವಿಂದರು, ಶ್ರೀಮಾತಾಜಿ ಅವರು, ಮಧುರಚೆನ್ನರು ಮತ್ತು ಬಸವಾದಿ ಶರಣರು ಅವರ ಅಂತರಂಗವನ್ನು ಬೆಳಗಿದ ಮಾಹಾಚೇತನರು. ಶುದ್ಧ ಸಾತ್ವಿಕ ಸ್ವಭಾವದ ಡಾ. ಗುರುಲಿಂಗ ಕಾಪಸೆ ಅವರು ಅಂತರಂಗದ ಅನುಭಾವಿಗಳಾಗಿ ಸಾಧನೆ ಮಾಡಿದವರು. ತಮ್ಮ ಅಪಾರ ಓದಿನಿಂದ ದಕ್ಕಿದ ಜ್ಞಾನವನ್ನು ವಿದ್ಯಾರ್ಥಿಗಳಿಗೆ ಧಾರೆಯೆರೆಯುವಲ್ಲಿಯೇ ಅವರು ವೃತ್ತಿಜೀವನದಲ್ಲಿ ನೆಮ್ಮದಿ ಕಂಡಿದ್ದಾರೆ. ಡಾ. ಗುರುಲಿಂಗ ಕಾಪಸೆ ಅವರು ಹೆಚ್ಚು ಗ್ರಂಥಗಳನ್ನು ಬರೆದಿಲ್ಲವಾದರೂ, ‘ನನ್ನ ವಿದಾರ್ಥಿಗಳೇ ನಾನು ಬರೆದ ಸಾವಿರಾರು ಗ್ರಂಥಗಳು’ ಎಂಬ ಸಂತೃಪ್ತಿ ಹೊಂದಿದವರು. ‘ಮಧುರಚೆನ್ನ ಪಿಎಚ್.ಡಿ. ಪ್ರಬಂಧ, ೧೩ ಸ್ವತಂತ್ರ ಕೃತಿಗಳು, ೧೭ ಸಂಪಾದನೆಗಳು, ಅನುವಾದಿತ ಗ್ರಂಥಗಳು-ಹೀಗೆ ಅವರ ಸಾಹಿತ್ಯರಾಶಿ ವಿಪುಲವಾಗಿಯೇ ಇದೆ. ಕೇಳುವ ಎಲ್ಲ ಮನಸ್ಸುಗಳಿಗೂ ಅರಿವಿನ ಬೆಳಕು ಮೂಡಿಸುವ ವಾಗ್ಮಿ ಅವರಾಗಿದ್ದಾರೆ.

ಕರ್ನಾಟಕ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷತೆಯನ್ನೂ ಒಳಗೊಂಡಂತೆ ಹಲವಾರು ಸಂಘ- ಸಂಸ್ಥೆಗಳ ನೇತೃತ್ವ ವಹಿಸಿ, ದಕ್ಷತೆ ಮತ್ತು ಪ್ರಾಮಾಣಿಕತೆಯಿಂದ ಕಾರ್ಯ ಮಾಡಿದ ಅವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿಯ ಪ್ರಶಸ್ತಿಯನ್ನೂ ಒಳಗೊಂಡಂತೆ ಅನೇಕ ಪ್ರಶಸ್ತಿಗಳು ಸಂದಿವೆ. ದಣಿವರಿಯದೆ ನಿರಂತರವಾಗಿ ಸಾಹಿತ್ಯ ಕೃಷಿಗೈದ ಅನುಭಾವಿ ಡಾ. ಗುರುಲಿಂಗ ಕಾಪಸೆ ಅವರು ದಿನಾಂಕ ೨೭-೩-೨೦೨೪ ರಂದು ನಮ್ಮನ್ನಗಅದರು. ಇಂಥ ಹಿರಿಯ ಸಾಧಕ-ಸಾಹಿತಿಯ ಸ್ಮರಣಾರ್ಥವಾಗಿ ಅವರ ವಿದ್ಯಾರ್ಥಿಗಳು, ಕುಟುಂಬದ ಸದಸ್ಯರು ಹಾಗೂ ಹಿತೈಷಿಗಳು ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ೧೧,೨೧,೧೧೧ ರೂಪಾಯಿಗಳ ಮೊತ್ತದ ದತ್ತಿಯನ್ನು ಸ್ಥಾಪಿಸಿದ್ದಾರೆ. ಇದರಿಂದ ಪ್ರತಿವರ್ಷ ಬರುವ ಬಡ್ಡಿಯ ಹಣದಲ್ಲಿ ಕನ್ನಡದ ಇಬ್ಬರು ಮಹತ್ವದ ಸಾಹಿತಿಗಳಿಗೆ ತಲಾ ರೂ, ೨೫,೦೦೦/-ರೂಪಾಯಿಗಳ ಪ್ರಶಸ್ತಿಯನ್ನು ಹಾಗೂ ಕ.ವಿ.ವಿ.ಯಲ್ಲಿ ಎಂ.ಎ. ಕನ್ನಡ ಓದುತ್ತಿರುವ ಒಬ್ಬ ವಿದ್ಯಾರ್ಥಿಗೆ ೫,೦೦೦/- ರೂಪಾಯಿಗಳ ವಿದ್ಯಾರ್ಥಿ ಪಾರಿತೋಷಕವನ್ನು ಕೊಡಮಾಡಲಾಗುತ್ತದೆ.

೨೦೨೫ನೆಯ ಸಾಅನ ಡಾ. ಗುರುಲಿಂಗ ಕಾಪಸೆ ಸಾಹಿತ್ಯ ಪ್ರಶಸ್ತಿಗಳನ್ನು ಹಿರಿಯ ಸಾಹಿತಿಗಳಾದ ಪ್ರೊ. ಮಾಲತಿ ಪಟ್ಟಣಶೆಟ್ಟಿ ಹಾಗೂ ಪ್ರೊ. ಎಸ್.ಜಿ. ಸಿದ್ಧರಾಮಯ್ಯ ಅವರಿಗೆ ಪ್ರದಾನ ಮಾಡಲು ಕರ್ನಾಟಕ ವಿದ್ಯಾವರ್ಧಕ ಸಂಘದ ಆಯ್ಕೆ ಸಮಿತಿಯು ನಿರ್ಧರಿಸಿದೆ.

SHANKAR G

View Comments

  • [4606]Laliga Login Malaysia | Slot Deposit Touch n Go & Kasino Live,Sertai laliga untuk akses casino live dealer malaysia yang lancar. Download app laliga sekarang dan mula cara main baccarat online dengan mudah. visit: laliga

  • The bonuses here are insane! I managed to get a nice win on my first try today. Definitely spending more time on krbetmgm from now on.

  • If you are looking for the most updated links and the best slot action, this is it. Everything is organized and easy to navigate. Visit temposlotlink for the best slots.

  • [8768]ek3 Official Login | সেরা অনলাইন ক্যাসিনো এবং দ্রুত বিকাশ পেমেন্ট,ek3 অফিশিয়াল লগইন করে সেরা স্লট গেমের নিয়ম জানুন এবং দ্রুত বিকাশ পেমেন্টের মাধ্যমে লেনদেন করুন। আজই অ্যাপটি ডাউনলোড করে খেলা শুরু করুন। visit: ek3

  • Hey everyone, looking for something new and stumble upon vin123. Is it legit? Anyone know? If someone try, share your experience! Here's the link: vin123

  • Yo, anyone else playing pk786game? Heard some good things. Gotta try my hand at it tonight. Maybe I'll finally win something! Check out pk786game

  • jljl7 - jljl7 Casino Philippines: Login, Register & App Download for Top Online Slots.Experience the best online gaming at jljl7 Casino Philippines! Secure your jljl7 login, complete your jljl7 register, and get the jljl7 app download to enjoy top-rated jljl7 slot games. Join the leading jljl7 casino today for exclusive rewards and big wins! visit: jljl7

  • Alright, so I stumbled upon 2777cx. Seems promising. Checking it out, hoping to find something good. Here's the link if you want to join: 2777cx

Recent Posts

ಹೀಗಿತ್ತು ಯೌವನಾಶ್ವ ಆಳುತ್ತಿದ್ದ ನಗರಿ – ಡಾ. ವಿಶ್ವನಾಥ್ ಏನ್. ನೇರಳಕಟ್ಟೆ

ಅಣ್ಣ ಧರ್ಮಜನ ಬಗೆಗೆ ಹೂಮನಸ್ಸನ್ನಿಟ್ಟುಕೊಂಡು ಯೌವನಾಶ್ವನ ಅಶ್ವವನ್ನು ಗೆದ್ದುತರುವ ಹುಮ್ಮಸ್ಸಿನಲ್ಲಿ ವೃಷಧ್ವಜ ಮೇಘನಾದರ ಜೊತೆಗೆ ಹಸ್ತಿನಾವತಿಯಿಂದ ಹೊರಟಿದ್ದ ಅನಿಲಸುತನೀಗ ಭದ್ರಾವತಿ…

57 years ago

ಬೆಳಗಾವಿಯಲ್ಲಿ ಜುಲೈ 21ರಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ಬೆಳಗಾವಿ ವಲಯದ (7 ಜಿಲ್ಲೆಗಳ) ಯುವಕವಿಗೋಷ್ಠಿ ಕಾರ್ಯಕ್ರಮ

ಕರ್ನಾಟಕ ಸಾಹಿತ್ಯ ಅಕಾಡೆಮಿಯ ಪ್ರತಿಷ್ಠಿತ ಯುವಕವಿಗೋಷ್ಠಿಗೆ ಒಟ್ಟು ೨೩ ಯುವಕವಿಗಳು ಆಯ್ಕೆಯಾಗಿದ್ದು, ಜುಲೈ 21ರಂದು ಬೆಳಗಾವಿಯಲ್ಲಿ ನಡೆಯಲಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು…

57 years ago

ತುಮಕೂರಿನಲ್ಲಿ ಜುಲೈ ೧೦ರಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ಬೆಂಗಳೂರು ವಲಯದ (8 ಜಿಲ್ಲೆಗಳ) ಯುವಕವಿಗೋಷ್ಠಿ ಕಾರ್ಯಕ್ರಮ

ಕರ್ನಾಟಕ ಸಾಹಿತ್ಯ ಅಕಾಡೆಮಿಯ ಪ್ರತಿಷ್ಠಿತ ಯುವಕವಿಗೋಷ್ಠಿಗೆ ಒಟ್ಟು ೨೩ ಯುವಕವಿಗಳು ಆಯ್ಕೆಯಾಗಿದ್ದು, ಜುಲೈ ೧೦ರಂದು ತುಮಕೂರಿನಲ್ಲಿ ನಡೆಯಲಿದೆ. ಈ ಕಾರ್ಯಕ್ರಮಕ್ಕೆ…

57 years ago