ಅಪ್ಪನ ಕೈಯ ಮ್ಯಾಲೆ
ಎಷ್ಟೊಂದು ಬಾವಿ-ಕೆರೆ, ಒಡ್ಡು-ಬಾಂದಾರ್-
ಗಳು ತಲೆ ಎತ್ತಿದವು!
ಅಪ್ಪ ತೋಡಿದ ಬಾವಿ-ಕೆರೆ ಎಂದೂ ಬತ್ತಲಿಲ್ಲ
ಹಾಕಿದ ಒಡ್ಡು-ಬಾಂದಾರ ಎಂದೂ ಒಡೆಯಲಿಲ್ಲ
ಇಡೀ ಊರಿಗೇ ಊರೇ
ಅಪ್ಪ ತೋಡಿದ ಬಾವಿ-ಕೆರೆ ನೀರು ಕುಡಿಯುತ್ತಾರೆ
ಅಪ್ಪ ಮಾತ್ರ ಬಾವಿ-ಕೆರೆ ಮುಟ್ಟಂಗಿಲ್ಲ,
ಮುಟ್ಟಿ ನೀರು ಕುಡಿಯಾಂಗಿಲ್ಲ
ಅಪ್ಪ ಬಿತ್ತಿದ ಬೀಜ ಎಂದೂ ಹುಸಿ ಹೋಗಲಿಲ್ಲ
ಒಂದು ಎರಡಾಗಿ, ಎರಡು ಮೂರು, ನಾಲ್ಕಾಗಿ
ನೆಲ ತುಂಬ ಹಸಿರು ಮೂಡಿ ದವಸ,
ಧಾನ್ಯ ಹುಲುಸಾಗಿ ಬೆಳೆದರೂ
ಅಪ್ಪನಿಗೆ ಕಡಗಣದ ಮಣ್ಕಾಳೆ ಕೊಡುಗೆ
ಅಪ್ಪ ಕಟ್ಟಿದ ಮನೆ-ಮಹಲು, ಗುಡಿ-ಗುಂಡಾರ
ಅಪ್ಪನ ಬೆವರ ಹನಿಯ ಫಲ
ಒಂದೂ ಕಲ್ಲು, ಹಿಡಿ ಮಣ್ಣು ಉದಿರಿಲ್ಲ
ಇಂದಿಗೂ ಗಟ್ಟಿಮುಟ್ಟಾಗಿ ನಿಂತಿವೆ
ಉಳ್ಳವರಿಗೆ ನೆಲೆಯಾಗಿವೆ
ಅಪ್ಪನ ಶ್ರಮಕ್ಕೆ ಭಾಷ್ಯ ಬರೆಯುತ್ತಿವೆ
ಅಪ್ಪ ಮಾತ್ರ ಇಂದಿಗೂ
ಅದೇ ಮುರುಕು ಗುಡಿಸಲಲ್ಲಿ
ಸೂರ್ಯ, ಚಂದ್ರರ ಜೊತೆಯಲ್ಲಿ
ದವಂತಿ ಕಥೆ ಹೇಳುತ್ತಲೇ ಇದ್ದಾನೆ
ತೊಡೆಯ ಮೇಲಿನ ಮೊಮ್ಮಗಳು ಹುಂಗುತ್ತಲೇ ಇದ್ದಾಳೆ
ಕರ್ನಾಟಕ ಸಾಹಿತ್ಯ ಅಕಾಡೆಮಿಯ ಪ್ರತಿಷ್ಠಿತ ಯುವಕವಿಗೋಷ್ಠಿಗೆ ಒಟ್ಟು ೨೩ ಯುವಕವಿಗಳು ಆಯ್ಕೆಯಾಗಿದ್ದು, ಜುಲೈ ೧೦ರಂದು ತುಮಕೂರಿನಲ್ಲಿ ನಡೆಯಲಿದೆ. ಈ ಕಾರ್ಯಕ್ರಮಕ್ಕೆ…
ಅಶ್ವಮೇಧ ಯಾಗದ ಕುದುರೆ ಹೇಗಿದ್ದರೆ ಚೆನ್ನ ಎಂಬ ಮಾತು ಮುನಿವರ್ಯರಿಂದ ಮೂಡಿಬಂತು. ಕುದುರೆ ಸ್ವಚ್ಛವಾಗಿರಬೇಕು. ಶ್ವೇತವರ್ಣದಿಂದ ಕಂಗೊಳಿಸುತ್ತಿರಬೇಕು. ನೋಡುವುದಕ್ಕೆ ಆಕರ್ಷಕವಾಗಿರಬೇಕು.…
ನಿಲ್ಲುವುದೇ ಸಾವು ಚಲಿಸುವುದೇ ಬಾಳು – ಕುವೆಂಪು ನಮ್ಮ ಬದುಕಿನಲ್ಲಿ ಸಾಯುವುದೆಂದರೆ ಏನು? ಚಲನೆಯಿಲ್ಲದೆ ಕಾಲ ಹಾಯಿಸುವುದೇನು? ಬದಲಾವಣೆ, ಚಟುವಟಿಕೆ,…
ಆಗ ತಾನೇ ಕುರುಕ್ಷೇತ್ರ ಯುದ್ಧ ಮುಗಿದಿತ್ತು. ಆದರೆ ನನ್ನ ಅಗ್ರಜನೆನಿಸಿಕೊಂಡ ಧರ್ಮಜನ ಚಿತ್ತದೊಳಗೆ ಕಲಹವೊಂದು ಆರಂಭವಾಗಿತ್ತು. ಅದು ಧರ್ಮ ಅಧರ್ಮಗಳ…
ಏಕ ವ್ಯಕ್ತಿಯಲ್ಲಿ ಬಹು ಚಹರೆಗಳನ್ನು ಬಿಂಬಿಸುವ ಕಲಾಪ್ರೌಢಿಮೆಯ ಸೃಜನಶೀಲ ಪ್ರಯತ್ನ ರಂಗ ಸಂಪದ ಬೆಂಗಳೂರು ಕರ್ನಾಟಕದ ರಂಗಭೂಮಿಯನ್ನು ಕಳೆದ ಐದು…