ಅಪ್ಪನ ಕೈಯ ಮ್ಯಾಲೆ
ಎಷ್ಟೊಂದು ಬಾವಿ-ಕೆರೆ, ಒಡ್ಡು-ಬಾಂದಾರ್-
ಗಳು ತಲೆ ಎತ್ತಿದವು!
ಅಪ್ಪ ತೋಡಿದ ಬಾವಿ-ಕೆರೆ ಎಂದೂ ಬತ್ತಲಿಲ್ಲ
ಹಾಕಿದ ಒಡ್ಡು-ಬಾಂದಾರ ಎಂದೂ ಒಡೆಯಲಿಲ್ಲ
ಇಡೀ ಊರಿಗೇ ಊರೇ
ಅಪ್ಪ ತೋಡಿದ ಬಾವಿ-ಕೆರೆ ನೀರು ಕುಡಿಯುತ್ತಾರೆ
ಅಪ್ಪ ಮಾತ್ರ ಬಾವಿ-ಕೆರೆ ಮುಟ್ಟಂಗಿಲ್ಲ,
ಮುಟ್ಟಿ ನೀರು ಕುಡಿಯಾಂಗಿಲ್ಲ
ಅಪ್ಪ ಬಿತ್ತಿದ ಬೀಜ ಎಂದೂ ಹುಸಿ ಹೋಗಲಿಲ್ಲ
ಒಂದು ಎರಡಾಗಿ, ಎರಡು ಮೂರು, ನಾಲ್ಕಾಗಿ
ನೆಲ ತುಂಬ ಹಸಿರು ಮೂಡಿ ದವಸ,
ಧಾನ್ಯ ಹುಲುಸಾಗಿ ಬೆಳೆದರೂ
ಅಪ್ಪನಿಗೆ ಕಡಗಣದ ಮಣ್ಕಾಳೆ ಕೊಡುಗೆ
ಅಪ್ಪ ಕಟ್ಟಿದ ಮನೆ-ಮಹಲು, ಗುಡಿ-ಗುಂಡಾರ
ಅಪ್ಪನ ಬೆವರ ಹನಿಯ ಫಲ
ಒಂದೂ ಕಲ್ಲು, ಹಿಡಿ ಮಣ್ಣು ಉದಿರಿಲ್ಲ
ಇಂದಿಗೂ ಗಟ್ಟಿಮುಟ್ಟಾಗಿ ನಿಂತಿವೆ
ಉಳ್ಳವರಿಗೆ ನೆಲೆಯಾಗಿವೆ
ಅಪ್ಪನ ಶ್ರಮಕ್ಕೆ ಭಾಷ್ಯ ಬರೆಯುತ್ತಿವೆ
ಅಪ್ಪ ಮಾತ್ರ ಇಂದಿಗೂ
ಅದೇ ಮುರುಕು ಗುಡಿಸಲಲ್ಲಿ
ಸೂರ್ಯ, ಚಂದ್ರರ ಜೊತೆಯಲ್ಲಿ
ದವಂತಿ ಕಥೆ ಹೇಳುತ್ತಲೇ ಇದ್ದಾನೆ
ತೊಡೆಯ ಮೇಲಿನ ಮೊಮ್ಮಗಳು ಹುಂಗುತ್ತಲೇ ಇದ್ದಾಳೆ
ಅಣ್ಣ ಧರ್ಮಜನ ಬಗೆಗೆ ಹೂಮನಸ್ಸನ್ನಿಟ್ಟುಕೊಂಡು ಯೌವನಾಶ್ವನ ಅಶ್ವವನ್ನು ಗೆದ್ದುತರುವ ಹುಮ್ಮಸ್ಸಿನಲ್ಲಿ ವೃಷಧ್ವಜ ಮೇಘನಾದರ ಜೊತೆಗೆ ಹಸ್ತಿನಾವತಿಯಿಂದ ಹೊರಟಿದ್ದ ಅನಿಲಸುತನೀಗ ಭದ್ರಾವತಿ…
ಕರ್ನಾಟಕ ಸಾಹಿತ್ಯ ಅಕಾಡೆಮಿಯ ಪ್ರತಿಷ್ಠಿತ ಯುವಕವಿಗೋಷ್ಠಿಗೆ ಒಟ್ಟು ೨೩ ಯುವಕವಿಗಳು ಆಯ್ಕೆಯಾಗಿದ್ದು, ಜುಲೈ 21ರಂದು ಬೆಳಗಾವಿಯಲ್ಲಿ ನಡೆಯಲಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು…
ಕರ್ನಾಟಕ ಸಾಹಿತ್ಯ ಅಕಾಡೆಮಿಯ ಪ್ರತಿಷ್ಠಿತ ಯುವಕವಿಗೋಷ್ಠಿಗೆ ಒಟ್ಟು ೨೩ ಯುವಕವಿಗಳು ಆಯ್ಕೆಯಾಗಿದ್ದು, ಜುಲೈ ೧೦ರಂದು ತುಮಕೂರಿನಲ್ಲಿ ನಡೆಯಲಿದೆ. ಈ ಕಾರ್ಯಕ್ರಮಕ್ಕೆ…