ಕವಿತೆಗಳು

ವಿಷ್ಣು ಆರ್. ನಾಯ್ಕ ಅವರು ಬರೆದ ಕವಿತೆ ‘ಸಾಧನೆಯ ದಾರಿ’

ಏಳು.. ಎದ್ದೇಳು ಚಾತಕ ಪಕ್ಷಿ
ಮೊದಲ ಮಳೆ ಹನಿಗೆ ಬಾಯ್ದೆರೆದು
ಜಾಡ್ಯಗಳ ಕಿತ್ತೆಸೆದು
ಪುಚ್ಚ ಬಿಚ್ಚು
ಗರಿಗರಿಯ ಗೂಡು ಬಿಟ್ಟು
ಕನಸುಗಳ ಕಣ್ಣುಕಟ್ಟು
ಸಿಡಿಲು, ಮಿಂಚುಗಳ ವಾದ್ಯ, ಬೆಳಕಲಿ ಮಿಂದು
ಮಾರ್ದನಿಯಿಟ್ಟು
ಸಿಡಿಲಾಗಿ ಮೊಳಗಲಿ ಸಾಧನೆಯ ಕೆಚ್ಚು

ಸಾಧನೆಯಾಗಸದ ತುಂಬ
ನಿನ್ನದೆ ಹೆದ್ದಾರಿ
ಗಮಿಸು ‘ಭೀಮ ಪರಾಕ್ರಮ’ದ ದಾರಿ
ಅಡೆತಡೆಗಳನೆಲ್ಲ ಮೀರಿ
ಕೋಟಿ ಸೂರ್ಯ ಪ್ರಭೆಯ ಬೀರಿ
ಸಾಗು…ಸಾಗು..ಸಾಗೂ…
ನೀ ಮುಂದಕೆ
ನಿನ್ನ ಭೂತದ ನೋವು ,ನಿರಾಶೆ, ಹತಾಶೆ
ಎಲ್ಲ ಕಿತ್ತೆಸೆದು ಸಾಗು
ನಿನ್ನ ಮೊಗ್ಗಾದ ಕನಸುಗಳಿಗೆ
ಹನಿಸು ಪ್ರೇಮದ ನೀರು
ಊರು ಶಕ್ತಿಯ ಬೇರು
ಹೀರು ಪಾತಾಳದ ಸುಧೆಯ ನೀರು
ಗಗನವೇ ತವರೂರು
ಏರು…ಏರು….ಏರೂ…
ನೂಕು ‘ಶಂಕೆ’ಯ ತೇರು

ನಿನಗೆ ಪ್ರೇರಕರುಂಟು
ಮಾರ್ಗದರ್ಶಕರುಂಟು
ಗಂಗೆಯ ಬುವಿಗಿಳಿಸಿದ ‘ಭಗೀರಥ’ರುಂಟು
ಕನಸುಗಳಿಗೆ ಕನಸು ‘ಕಡ’ಕೊಟ್ಟ
ಭವ್ಯ ಸಾಧಕರುಂಟು
ನಿನ್ನ ಹಾರುವಿಕೆ ಭೂಮಿಯ ಹತ್ತಿರಕ್ಕೋ..
ಸಾಧನೆಯ ಉತ್ತರಕ್ಕೋ…!
ಮಾರ್ಗ ನಿನ್ನದೇ… ಮನಸು ನಿನ್ನದೇ..!
ಸಾಗು ಮುಂದಕೆ ಹಾರು.. ಗುರಿಯೇರು…
ಆಯ್ಕೆ ನಿನ್ನದು ಮುದ್ದು ಹಕ್ಕಿ
ಆದರೆ…
ನೀ ಸಾಗುವ ಹಾದಿ ಎಷ್ಟು
ದುರ್ಗಮವೇ ಇರಲಿ…
ಒಮ್ಮೆ ಕ್ರಮಿಸಿಬಿಡು
ಕಲ್ಲು ಮುಳ್ಳುಗಳ ಮಧ್ಯೆ
ನಡೆದು ಗುರಿ ಸೇರಿ ನಿಂತು
ಆನಂದ ಭಾಷ್ಪ ಸುರಿಸಿಬಿಡು
ನಿನ್ನ ಸಾಗುವ ಹಾದಿ
ಭವಿತವ್ಯದ ಜೀವಕ್ಕೆ
‘ರಾಜ ಮಾರ್ಗ’ವಾಗಿ
ನಿನ್ನ ಹೆಜ್ಜೆಯ ಮೇಲೆ ಹೆಜ್ಜೆಗಳುದಿಸಲಿ
ನಲುಗಿದ ಜೀವಕೆ ಕಾರುಣ್ಯವುದಿಸಲಿ

– ವಿಷ್ಣು ಆರ್. ನಾಯ್ಕ
ಶಿಕ್ಷಕರು, ಜಿಡ್ಡಿ, ಸಿದ್ದಾಪುರ.

SHANKAR G

Share
Published by
SHANKAR G

Recent Posts

ಹೀಗಿತ್ತು ಯೌವನಾಶ್ವ ಆಳುತ್ತಿದ್ದ ನಗರಿ – ಡಾ. ವಿಶ್ವನಾಥ್ ಏನ್. ನೇರಳಕಟ್ಟೆ

ಅಣ್ಣ ಧರ್ಮಜನ ಬಗೆಗೆ ಹೂಮನಸ್ಸನ್ನಿಟ್ಟುಕೊಂಡು ಯೌವನಾಶ್ವನ ಅಶ್ವವನ್ನು ಗೆದ್ದುತರುವ ಹುಮ್ಮಸ್ಸಿನಲ್ಲಿ ವೃಷಧ್ವಜ ಮೇಘನಾದರ ಜೊತೆಗೆ ಹಸ್ತಿನಾವತಿಯಿಂದ ಹೊರಟಿದ್ದ ಅನಿಲಸುತನೀಗ ಭದ್ರಾವತಿ…

56 years ago

ಬೆಳಗಾವಿಯಲ್ಲಿ ಜುಲೈ 21ರಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ಬೆಳಗಾವಿ ವಲಯದ (7 ಜಿಲ್ಲೆಗಳ) ಯುವಕವಿಗೋಷ್ಠಿ ಕಾರ್ಯಕ್ರಮ

ಕರ್ನಾಟಕ ಸಾಹಿತ್ಯ ಅಕಾಡೆಮಿಯ ಪ್ರತಿಷ್ಠಿತ ಯುವಕವಿಗೋಷ್ಠಿಗೆ ಒಟ್ಟು ೨೩ ಯುವಕವಿಗಳು ಆಯ್ಕೆಯಾಗಿದ್ದು, ಜುಲೈ 21ರಂದು ಬೆಳಗಾವಿಯಲ್ಲಿ ನಡೆಯಲಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು…

56 years ago

ತುಮಕೂರಿನಲ್ಲಿ ಜುಲೈ ೧೦ರಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ಬೆಂಗಳೂರು ವಲಯದ (8 ಜಿಲ್ಲೆಗಳ) ಯುವಕವಿಗೋಷ್ಠಿ ಕಾರ್ಯಕ್ರಮ

ಕರ್ನಾಟಕ ಸಾಹಿತ್ಯ ಅಕಾಡೆಮಿಯ ಪ್ರತಿಷ್ಠಿತ ಯುವಕವಿಗೋಷ್ಠಿಗೆ ಒಟ್ಟು ೨೩ ಯುವಕವಿಗಳು ಆಯ್ಕೆಯಾಗಿದ್ದು, ಜುಲೈ ೧೦ರಂದು ತುಮಕೂರಿನಲ್ಲಿ ನಡೆಯಲಿದೆ. ಈ ಕಾರ್ಯಕ್ರಮಕ್ಕೆ…

56 years ago