ಷಣ್ಮುಖಾರಾಧ್ಯ ಕೆ ಪಿ ಅವರು ಬರೆದ ಕವಿತೆ ‘ಸ್ಥಿತ ಪ್ರಜ್ಞ’

ನಡೆವ ಹಾದಿಯ ಎದುರಿಗಿದೆ ದೊಡ್ಡ ಪರ್ವತ
ನನ್ನ ಗಮ್ಯವೆಲ್ಲ ಅದನ್ನು ಏರುವುದಷ್ಟೇ
ಕಲ್ಲು ಮರ ಅಥವಾ ಹಿಮದಿಂದಲೋ ಅದು ಆವೃತ
ದೂರದಿಂದ ಕಾಣುವುದು ನುಣ್ಣಗಷ್ಟೇ

ನಡೆವ ಹಾದಿಯಲ್ಲಿ ಹುಲ್ಲು ಮುಳ್ಳು ಗಳಿರಬಹುದು
ಗಮನವೆಲ್ಲ ಗುರಿಯ ಮೇಲಷ್ಟೇ
ಬಿರುಗಾಳಿ ಅಥವಾ ತಂಗಾಳಿ ಬೀಸುತಿರಬಹುದು
ಹೆಜ್ಜೆಯ ಮುಂದೆ ಇಡುತಿರಬೇಕಷ್ಟೆ

ಮಧ್ಯಾಹ್ನದ ಬಿಸಿಲು ಇಲ್ಲ ಸಂಜೆಯ ತಂಪಿರಬಹುದು
ಹಾದಿಯ ತಿರುವುಗಳು ತಿಳಿದಿರಬೇಕಷ್ಟೆ
ಮಳೆಗಾಲವಿರಬಹುದು ಸುಡು ಬೇಸಿಗೆ ಬರಬಹುದು
ಕ್ರಮಿಸಿದ ಕಾಲದ ಬಗ್ಗೆ ನೆನಪಿರಬೇಕಷ್ಟೆ

ಬಿದ್ದಾಗ ತಳ್ಳುವರಿರಬಹುದು, ಕೈ ನೀಡಿ ಎತ್ತುವವರಿರಬಹುದು
ಮುಂದಿಡುವ ಹೆಜ್ಜೆಗಳ ನಿಲ್ಲಿಸಬಾರದಷ್ಟೇ
ಮುಂದೆ ಚಪ್ಪಾಳೆ ಕೇಳಬಹುದು, ಹಿಂದೆ ಕೈ ತೋರಿಸಿ ನಗುವವರಿರಬಹುದು
ಮನಸ್ಸು ಸ್ಥಿಮಿತವಾಗಿರಬೇಕಷ್ಟೆ

ಪರ್ವತದ ತುದಿಯನೇರಿ ನೀ ನಡೆದ ಹಾದಿಯ ಕಾಣಬಹುದು
ಕೊನೆಗೆ ಕಾಣುವುದು ನೀ ನಡೆದ ಹೆಜ್ಜೆಗಳಷ್ಟೇ…

0
    0
    Your Cart
    Your cart is emptyReturn to Shop