ಮಿಂಚುಳ್ಳಿ ಕಾರ್ಯಕ್ರಮಗಳ ಚಿತ್ರಗಳು

ಕುಪ್ಪಳಿಯಲ್ಲಿ ನಡೆದ ಎರಡು ದಿನಗಳ ಮಿಂಚುಳ್ಳಿ ಕಥಾ-ಕಾವ್ಯ ಕಮ್ಮಟ 2024 ಫೋಟೋ ಆಲ್ಬಮ್

ಸಾಹಿತ್ಯದ ಓದು, ಶ್ರದ್ಧೆ, ಶಿಸ್ತು, ಸಂಯಮ ಮತ್ತು ಸಂವಾದ ನಮ್ಮನ್ನು ಮತ್ತೆ ಮತ್ತೆ ಪೊರೆಯುತ್ತವೆ.

ಮೊದಲ ಕಮ್ಮಟದ ಅಭಿಪ್ರಾಯದಿಂದಾಗಿ ಈ ಬಾರಿ ಬಂದ ಅರ್ಜಿಗಳ ಸಂಖ್ಯೆಯು ಹೆಚ್ಚಿತ್ತು. ವಿಶೇಷವಾಗಿ ಈ ಬಾರಿ ಉತ್ತರ ಕರ್ನಾಟಕ ಭಾಗದ ಗೆಳೆಯರು ಅತಿ ಹೆಚ್ಚು ಇದ್ದರು. ಒಟ್ಟಾರೆಯಾಗಿ ಕರ್ನಾಟಕದ ಎಲ್ಲಾ ಭಾಗದ ಗೆಳೆಯರು ಇದ್ದರು. ಪರಸ್ಪರ ಸಹಕಾರ, ಗೌರವ ಮತ್ತು ಪ್ರೀತಿ ಕೂಡ ನಮ್ಮನ್ನು ಮತ್ತೆ ಮತ್ತೆ ಪೊರೆಯುತ್ತವೆ.

ಸಂಪನ್ಮೂಲ ವ್ಯಕ್ತಿಗಳು ಮತ್ತು ಶಿಬಿರಾರ್ಥಿಗಳ ಸಹಕಾರದಿಂದಾಗಿ ಕುಪ್ಪಳಿಯಲ್ಲಿ ನಡೆದ ಎರಡು ದಿನಗಳ ಮಿಂಚುಳ್ಳಿ ಕಮ್ಮಟವು ಬಹಳ ಯಶಸ್ವಿಯಾಗಿದೆ, ವಿಶೇಷವಾಗಿ ಮಾರ್ಗದರ್ಶನ ನೀಡಿದ ನಾಡಿನ ಖ್ಯಾತ ಸಾಹಿತಿಗಳಾದ ಪ್ರೊ. ಎಸ್.ಜಿ. ಸಿದ್ಧರಾಮಯ್ಯ ಮತ್ತು ಕರ್ನಾಟಕ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಎಲ್. ಎನ್. ಮುಕುಂದರಾಜ್ ಮತ್ತು ಕಥಾ ಗೋಷ್ಠಿಗಳ ಸಂಪನ್ಮೂಲ ವ್ಯಕ್ತಿಗಳಾದ ಡಾ. ಕರೀಗೌಡ ಬೀಚನಹಳ್ಳಿ, ಡಾ. ಅಮರೇಶ ನುಗಡೋಣಿ,  ಕಾವ್ಯ ಮತ್ತು ಕಥಾ ಸಂವಾದ ಗೋಷ್ಠಿಗಳ ಸಮನ್ವಯ ಮಾಡಿದ ಡಾ. ರವಿಕುಮಾರ್ ಪಿ.ಜಿ. ಮತ್ತು ಡಾ. ಗುರುಸ್ವಾಮಿ ಸಿ. ಅನ್ನೇಹಾಳ್, ನವಿಲುಕಲ್ಲು ಸೂರ್ಯೋದಯ ಸಮನ್ವಯ ನಡೆಸಿಕೊಟ್ಟ ಡಾ. ಹಕೀಮ್ ಮತ್ತು ಫೋಟೋಗಳನ್ನು ಕ್ಲಿಕ್ಕಿಸಿದ ಅಜಯ್ ಕುಮಾರ್, ಸೋಮೇಶ್ ಸಿ.ಎಸ್. ಎಲ್ಲರಿಗೂ ತುಂಬು ಹೃದಯದ ಧನ್ಯವಾದಗಳು.

ಶಂಕರ್ ಸಿಹಿಮೊಗ್ಗೆ
ಸಂಪಾದಕ
ಮಿಂಚುಳ್ಳಿ ಸಾಹಿತ್ಯ ಪತ್ರಿಕೆ

ನೋಂದಾವಣಿಯ ಸಮಯ:-

ಉದ್ಘಾಟನೆ ಮತ್ತು ಗೋಷ್ಠಿಗಳು @ಹೇಮಾಂಗಣ :-

ನವಿಲುಕಲ್ಲು ಸೂರ್ಯೋದಯ ಮತ್ತು ಚಿಬ್ಬಲು ಗುಡ್ಡೆ ಪ್ರವಾಸ :-

ಆಯ್ದ ಕಾವ್ಯ ಮತ್ತು ಕಥಾ ಸಂವಾದ :-

ಕುವೆಂಪು ಜನ್ಮಸ್ಥಳ ಹೀರಿಕೊಡಿಗೆ ಪ್ರವಾಸ :-

ದೇವರು ರುಜು ಮಾಡಿದನು @ಚಿಬ್ಬಲು ಗುಡ್ಡೆ ಪ್ರವಾಸ

ಕವಿಶೈಲದಲ್ಲಿ ಮಿಂಚುಳ್ಳಿ ಕವಿಗೋಷ್ಠಿ :-

ಕಮ್ಮಟದ ಆಹ್ವಾನ ಪತ್ರಿಕೆ :-

 

 

 

 

SHANKAR G

View Comments

  • ಮಿಂಚುಳ್ಳಿಗೆ ಅಭಿನಂದನೆಗಳು ಮತ್ತು ಧನ್ಯವಾದಗಳು

    ಕಥಾ ಮತ್ತು ಕಾವ್ಯ ಕಮ್ಮಟಕ್ಕೆ ಬಂದಂತಹ ಶಿಬಿರಾರ್ಥಿಗಳು ರೂಪಕ, ಉಪಮೆ, ಪ್ರತಿಮೆಗಳನ್ನು ಬಳಸಿ ಪ್ರಬುದ್ಧಮಾನವಾಗಿ ತಮ್ಮ ಸ್ವ ರಚಿತ ಕಾವ್ಯಗಳನ್ನು ವಾಚನ ಮಾಡಿದರು. ಕವಿತೆಯ ವಸ್ತುಗಳಲ್ಲಿ ತುಂಬಾ ವಿಭಿನ್ನತೆ ಇತ್ತು. ಸಮಾಜ, ಸಂಸ್ಕೃತಿ, ಧರ್ಮ ಸಹಿಷ್ಣತೆಯನ್ನು ಕುರಿತು ಅನೇಕ ಯುವಕವಿಗಳು ಕವಿತೆಗಳನ್ನು ವಾಚಿಸಿದ್ದು ಗಮನಾರ್ಹ.

    ಕಮ್ಮಟದ ಆಯೋಜಕರು ಶಿಸ್ತುಭದ್ಧವಾಗಿ ಕಾಲ ಕಾಲಕ್ಕೆ ಶಿಬಿರಾರ್ಥಿಗಳಿಗೆ ವಿಶೇಷ ಉಪನ್ಯಾಸಗಳನ್ನು ಏರ್ಪಡಿಸಿದ್ದರು. ಪ್ರಾಯೋಗಿಕವಾಗಿ ಕವಿತೆಗಳನ್ನು ಕಟ್ಟುವ ಬಗೆಯನ್ನು ಒಳಹುಗಳನ್ನು ಸಂಪನ್ಮೂಲ ವ್ಯಕ್ತಿಗಳು ತಿಳಿಸಿಕೊಟ್ಟರು.

    ಊಟ ವಸತಿ ಪ್ರವಾಸ ಕಾವ್ಯಗೋಷ್ಠಿ ಕಥಾ ಗೋಷ್ಠಿ ಎಲ್ಲವೂ ಶಿಸ್ತುಬದ್ಧವಾಗಿ ಅಚ್ಚುಕಟ್ಟಾಗಿ ಏರ್ಪಟ್ಟಿದ್ದವು . ಹಿರಿಯ ಕವಿ, ಕಥೆಗಾರರು, ಲೇಖಕರು ಶಿಬಿರಾರ್ಥಿಗಳ ಜೊತೆಗೆ ಮುಕ್ತ ಮಾತುಕತೆಗೆ ಅವಕಾಶವಿತ್ತು.

    ಇಂತಹ ಕಮ್ಮಟಗಳಿಗೆ ಮತ್ತೆ ಮತ್ತೆ ಪಾಲ್ಗೊಳ್ಳುವುದು ಹೊಸ ತಲೆಮಾರಿನ ಬರಹಗಾರರಿಗೆ ಅವಶ್ಯಕ ಮತ್ತು ಅಗತ್ಯ.

    ವಂದನೆಗಳು
    ಮಿಂಚುಳ್ಳಿ..

Recent Posts

ತುಮಕೂರಿನಲ್ಲಿ ಜುಲೈ ೧೦ರಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ಬೆಂಗಳೂರು ವಲಯದ (8 ಜಿಲ್ಲೆಗಳ) ಯುವಕವಿಗೋಷ್ಠಿ ಕಾರ್ಯಕ್ರಮ

ಕರ್ನಾಟಕ ಸಾಹಿತ್ಯ ಅಕಾಡೆಮಿಯ ಪ್ರತಿಷ್ಠಿತ ಯುವಕವಿಗೋಷ್ಠಿಗೆ ಒಟ್ಟು ೨೩ ಯುವಕವಿಗಳು ಆಯ್ಕೆಯಾಗಿದ್ದು, ಜುಲೈ ೧೦ರಂದು ತುಮಕೂರಿನಲ್ಲಿ ನಡೆಯಲಿದೆ. ಈ ಕಾರ್ಯಕ್ರಮಕ್ಕೆ…

56 years ago

ಯಾಗದ ಬಗೆಯನ್ನು ವರ್ಣಿಸಿದರು ವ್ಯಾಸರು – ಡಾ. ವಿಶ್ವನಾಥ ಎನ್ ನೇರಳಕಟ್ಟ

ಅಶ್ವಮೇಧ ಯಾಗದ ಕುದುರೆ ಹೇಗಿದ್ದರೆ ಚೆನ್ನ ಎಂಬ ಮಾತು ಮುನಿವರ್ಯರಿಂದ ಮೂಡಿಬಂತು. ಕುದುರೆ ಸ್ವಚ್ಛವಾಗಿರಬೇಕು. ಶ್ವೇತವರ್ಣದಿಂದ ಕಂಗೊಳಿಸುತ್ತಿರಬೇಕು. ನೋಡುವುದಕ್ಕೆ ಆಕರ್ಷಕವಾಗಿರಬೇಕು.…

56 years ago

ಆತ್ಮಸ್ಥೈರ್ಯದ ಬೆಳಕು ನಮ್ಮ ಮುಂದಿರಲಿ.. – ಲಿಖಿತ್ ಹೊನ್ನಾಪುರ

ನಿಲ್ಲುವುದೇ ಸಾವು ಚಲಿಸುವುದೇ ಬಾಳು – ಕುವೆಂಪು ನಮ್ಮ ಬದುಕಿನಲ್ಲಿ ಸಾಯುವುದೆಂದರೆ ಏನು? ಚಲನೆಯಿಲ್ಲದೆ ಕಾಲ ಹಾಯಿಸುವುದೇನು? ಬದಲಾವಣೆ, ಚಟುವಟಿಕೆ,…

56 years ago

ಜೂನ್ 2025 ಮಿಂಚುಳ್ಳಿ ಸಂಚಿಕೆ

ಜೂನ್ 2025 ಮಿಂಚುಳ್ಳಿ ಸಂಚಿಕೆ ಓದಲು ಇಲ್ಲಿ ಕ್ಲಿಕ್ ಮಾಡಿ

56 years ago

ಧರ್ಮವೀರನ ಚಿತ್ತ ಖಿನ್ನತೆ – ಡಾ. ವಿಶ್ವನಾಥ ಎನ್ ನೇರಳಕಟ್ಟೆ

ಆಗ ತಾನೇ ಕುರುಕ್ಷೇತ್ರ ಯುದ್ಧ ಮುಗಿದಿತ್ತು. ಆದರೆ ನನ್ನ ಅಗ್ರಜನೆನಿಸಿಕೊಂಡ ಧರ್ಮಜನ ಚಿತ್ತದೊಳಗೆ ಕಲಹವೊಂದು ಆರಂಭವಾಗಿತ್ತು. ಅದು ಧರ್ಮ ಅಧರ್ಮಗಳ…

56 years ago

ಪುರಾಣ ಕಥನದ ಅಪೂರ್ವ ರಂಗ ಪ್ರಯೋಗ “ಶರ್ಮಿಷ್ಠೆ” – ನಾ ದಿವಾಕರ

ಏಕ ವ್ಯಕ್ತಿಯಲ್ಲಿ ಬಹು ಚಹರೆಗಳನ್ನು ಬಿಂಬಿಸುವ ಕಲಾಪ್ರೌಢಿಮೆಯ ಸೃಜನಶೀಲ ಪ್ರಯತ್ನ ರಂಗ ಸಂಪದ ಬೆಂಗಳೂರು ಕರ್ನಾಟಕದ ರಂಗಭೂಮಿಯನ್ನು ಕಳೆದ ಐದು…

56 years ago